ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

Get real time updates directly on you device, subscribe now.

2024-25ನೇ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಸಮನ್ವಯ ಶಿಕ್ಷಣ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಬ್ಲಾಕ್‌ಗಳಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷ ಸಂಪನ್ಮೂಲ ಶಿಕ್ಷಕರ (ಬಿ.ಐ.ಇ.ಆರ್.ಟಿ) ಹುದ್ದೆಗಳಿಗೆ ಅರ್ಹ ಶಿಕ್ಷಕರನ್ನು ನೇಮಿಸಿಕೊಳ್ಳಲು ಆರ್.ಸಿ.ಐ ನಿಯಮಾವಳಿ ಪ್ರಕಾರ ಸಮನ್ವಯ ಶಿಕ್ಷಣ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯಥಿಗಳಿಂದ ನೇರ ಗುತ್ತಿಗೆಯಡಿ ತಾತ್ಕಾಲಿಕವಾಗಿ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಪೂರ್ವ ಪ್ರಾಥಮಿಕ ಹಾಗೂ 1 ರಿಂದ 5ನೇ ತರಗತಿ, 6 ರಿಂದ 8ನೇ ತರಗತಿ ಮತ್ತು 9 ರಿಂದ 12ನೇ ತರಗತಿಗೆ ಬೋಧಿಸಲು ವಿಶೇಷ ಶಿಕ್ಷಕರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆರ್‌ಸಿಐ ನಲ್ಲಿ ನೋಂದಣಿ ಹೊಂದಿದ ಹಾಗೂ ಸಿ.ಆರ್.ಆರ್ ನಂಬರ್ ಮಾನ್ಯತೆ ಹೊಂದಿರುವ ಹಾಗೂ ಚಾಲ್ತಿಯಲ್ಲಿರುವ ಸಂಸ್ಥೆಗಳಿAದ ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಸೇವಾ ಜೇಷ್ಠತೆ ಪರಿಗಣಿಸಲಾಗುವುದು(ಈ ಹಿಂದೆ ಯಾವುದೇ ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ಸೇವಾ ವಿವರ). ವಿಶೇಷ ಶಿಕ್ಷಕರ ಕಾರ್ಯಕ್ಷಮತೆ ಪ್ರಮಾಣ ಪತ್ರ ಸಲ್ಲಿಸಬೇಕು. ಒಂದೇ ವಿಷಯಕೆಕ ಹೆಚ್ಚಿನ ಅರ್ಜಿಗಳು ಸ್ವೀಕೃತವಾದಲ್ಲಿ ಸೇವಾ ಜೇಷ್ಠತೆ ಪರಿಗಣಿಸಲಾಗುವುದು. ಸೆವಾ ಜೇಷ್ಠತೆ ಒಂದೇ ಆದಲ್ಲಿ ಅಂಕಗಳನ್ನು ಪರಿಗಣಿಸಲಾಗುವುದು. ಎರಡು ಮಾನದಂಡಗಳು ಒಂದೇ ಆಗಿದ್ದಲ್ಲಿ ಮಹಿಳಾ ಅಭ್ಯರ್ಥಿಗೆ ಆದ್ಯತೆ ನೀಡಲಾಗುವುದು.
ಹುದ್ದೆಗಳು ತಾತ್ಕಾಲಿಕವಾಗಿದ್ದು, ದಿನಾಂಕ : 31-03-2025 ರವರೆಗೆ ಅಥವಾ ಮುಂದಿನ ಆದೇಶದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಇರುತ್ತದೆ. ನೇರ ಗುತ್ತಿಗೆಯಡಿ ತಾತ್ಕಾಲಿಕವಾಗಿ ಸೇವೆ ಪಡೆದ ವಿಶೇಷ ಶಿಕ್ಷಕರು/ಬಿ.ಐ.ಇ.ಆರ್.ಟಿ ಹುದ್ದೆಗಳು ಸರ್ಕಾರಿ ಶಾಲಾ ವಿಶೇಷ ಶಿಕ್ಷಕರಿಂದ ಭರ್ತಿಯಾದಲ್ಲಿ ನೇರ ಗುತ್ತಿಗೆಯ ಬಿ.ಐ.ಇ.ಆರ್.ಟಿ ಗಳನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲಾಗುವುದು.
ಆಸಕ್ತರು ಜೂನ್ 10 ರ ಸಂಜೆ 05.30 ಗಂಟೆಯೊಳಗೆ  ಅಗತ್ಯ ದಾಖಲೆಗಳೊಂದಿಗೆ ಉಪನಿರ್ದೇಶಕರು ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಖಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ, ಕೊಪ್ಪಳ ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಹುದ್ದೆಗೆ ಸಂಬAಧಿಸಿದ ವಿದ್ಯಾರ್ಹತೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಸಮಗ್ರ ಶಿಕ್ಷಣ ಕರ್ನಾಟಕ, ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯ ದೂ.ಸಂ. 9480695414 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: