ಕ್ರೀಡಾ ಕ್ಷೇತ್ರಕ್ಕೆ ತಮ್ಮ ಕೊಡುಗೆಯನ್ನು ನೀಡಿದ ಜಿಲ್ಲೆಯ ಕ್ರೀಡಾಪಟುಗಳ ವಿವರ ನೋಂದಾಯಿಸಲು ಕ್ರೀಡಾಪಟುಗಳಿಗೆ ಸೂಚನೆ

Get real time updates directly on you device, subscribe now.

  ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ, ರಾಷ್ಟç ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಸಾಧನೆಗೈದು ಕ್ರೀಡಾ ಕ್ಷೇತ್ರಕ್ಕೆ ತಮ್ಮ ಕೊಡುಗೆಯನ್ನು ನೀಡಿದ ಜಿಲ್ಲೆಯ ಕ್ರೀಡಾಪಟುಗಳ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿರುವುರಿಂದ, ಜಿಲ್ಲೆಯ ಕ್ರೀಡಾಪಟುಗಳು ತಮ್ಮ ವಿವರ ನೋಂದಾಯಿಸಲು ಸೂಚಿಸಿದೆ.

ಜಿಲ್ಲೆಯ ಹಲವಾರು ಕ್ರೀಡಾಪಟುಗಳು ಆರ್ಥಿಕ ಹೊರೆಯನ್ನು ಮೀರಿ ಸಾಧನೆಯನ್ನು ಮಾಡಿರುತ್ತಾರೆ. ಈ ರೀತಿಯ ಕ್ರೀಡಾಪಟುಗಳಿಗೆ ಸಹಕಾರ ನೀಡಿ ಇನ್ನಷ್ಟು ಉತ್ತಮ ಸಾಧನೆ ಮಾಡಲು ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಶೈಕ್ಷಣಿಕ ಶುಲ್ಕ ಮರುಪಾವತಿ, ಕ್ರೀಡಾ ವಿದ್ಯಾರ್ಥಿ ವೇತನ, ನಗದು ಬಹುಮಾನ, ಏಕಲವ್ಯ, ಜೀವಮಾನ ಸಾಧನೆ, ಖೇಲ್ ರತ್ನ ಪ್ರಶಸ್ತಿ ಇನ್ನಿತರೆ ಕ್ರೀಡಾ ಪ್ರಶಸ್ತಿಗಳನ್ನು ಜಾರಿಗೆ ತಂದಿರುತ್ತದೆ. ದಸರಾ ಕ್ರೀಡಾಕೂಟ, ಮೈಸೂರು ದಸರಾ ಸಿ.ಎಂ. ಕಪ್  ಕ್ರೀಡಾಕೂಟ ಹಾಗೂ ಇನ್ನಿತರೆ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಜೊತೆಗೆ ವಿವಿಧ ಕ್ರೀಡಾ ಅಸೋಸಿಯೇಷನ್/ ಫೆಡರೇಷನ್ ವತಿಯಿಂದ ನಡೆಸುವ ರಾಜ್ಯ/ರಾಷ್ಟç ಮಟ್ಟದ ಕ್ರೀಡಾಕೂಟಗಳ ಮಾಹಿತಿ ನೀಡಲಾಗುವುದು.
ಆದ್ದರಿಂದ ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕ್ರೀಡೆಗಳಲ್ಲಿ ಕ್ರೀಡಾ ಸಾಧನೆಗೈದ ರಾಜ್ಯ, ರಾಷ್ಟç ಮತ್ತು ಅಂತರರಾಷ್ಟçಮಟ್ಟದ ಕ್ರೀಡಾಪಟುಗಳು ಅಗತ್ಯ ದಾಖಲೆಗಳೊಂದಿಗೆ ಇಲಾಖೆಯ ನಿಗದಿತ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ನೋಂದಾಯಿಸಲು ವಿನಂತಿಸಲಾಗಿದೆ. ಹಾಗೂ ವಾಟ್ಸಾö್ಯಪ್ ಕ್ಯೂಆರ್ ಕೋಡ್ ನೀಡಲಾಗಿದ್ದು, ಸ್ಕಾö್ಯನ್ ಮಾಡಿ ವಿವರಗಳನ್ನು ಭರ್ತಿ ಮಾಡಿ ಇಲಾಖೆಯ ಕಾರ್ಯಕ್ರಮಗಳ ಹಾಗೂ ಕ್ರೀಡಾಕೂಟಗಳ ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಗದಗ ರಸ್ತೆ, ಕೊಪ್ಪಳ ಕಛೇರಿಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: