ಸುಲಿಗೆ ಮಾಡಿದ ಅಪರಾಧಕ್ಕಾಗಿ ಅಪರಾಧಿಗಳಿಗೆ ಕಠಿಣ ಜೈಲು ಶಿಕ್ಷೆ
ಕೊಪ್ಪಳ ನಗರದಲ್ಲಿ ಸುಲಿಗೆ ಮಾಡಿದ ಅಪರಾಧಕ್ಕಾಗಿ ಅಪರಾಧಿಗಳಿಗೆ ಕಠಿಣ ಜೈಲು ಶಿಕ್ಷೆ ಪ್ರಕಟವಾಗಿದೆ.ಈ ಮೇರೆಗೆ ಗೌರವಾನ್ವಿತ ನ್ಯಾಯಾಧೀಶರಾದ ಮಹಾಂತೇಶ ಎಸ್ ದರಗದ ಅವರು ಆರೋಪಿತರ ಮೇಲಿರುವ ಕಳ್ಳತನ ಮತ್ತು ಸುಲಿಗೆ ಆರೋಪಗಳು ಸಾಭೀತಾಗಿವೆ ಎಂದು 2024ರ ಜೂನ್ 26ರಂದು 03 ವರ್ಷ 06 ತಿಂಗಳು ಜೈಲು ಶಿಕ್ಷೆ ಮತ್ತು ರೂ. 10,000 ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಕೊಪ್ಪಳ ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾದ ವಸಂತ ಅವರು ಸರ್ಕಾರದ ಪರವಾಗಿ ಪ್ರಕರಣ ನಡೆಸಿ ವಾದ ಮಂಡಿಸಿರುತ್ತಾರೆ ಎಂದು ಜಿಲ್ಲಾ ನ್ಯಾಯಾಲಯದ ಸರ್ಕಾರಿ ಅಭಿಯೋಜಕರ ಕಚೇರಿಯ ಪ್ರಕಟಣೆ ತಿಳಿಸಿದೆ.
Comments are closed.