ರಾಹುಲ್ ಗಾಂಧಿ ಯುವಜನತೆಯ ಕ್ಷಮೆಯಾಚಿಸಬೇಕು : ಸಿದ್ದರಾಮೇಶ ಹಳ್ಳಿ

Get real time updates directly on you device, subscribe now.

ಕೊಪ್ಪಳ : ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್‌ ಗಾಂಧಿಯವರು ಅಗ್ನಿಪಥ್ ಯೋಜನೆಯ ಬಗ್ಗೆ ಹಗುರವಾಗಿ ಮಾತನಾಡಿದ್ದು, ದೇಶದ ಸೈನಿಕರಿಗೆ ಮಾಡಿದ ಅವಮಾನವಾಗಿದೆ ಅವರು ಯುವಜನತೆಯ ಕ್ಷಮೆಯಾಚಿಸಬೇಕು ಎಂದು ಜಿಲ್ಲಾ ಬಿಜೆಪಿ ಪೂರ್ವ ಸೈನಿಕರ ಪ್ರಕೋಷ್ಠದ ಸಂಚಾಲಕ ಹಾಗೂ ರಾಜ್ಯ ಪೂರ್ವ ಸೈನಿಕರ ಪ್ರಕೋಷ್ಠದ ಸದಸ್ಯ ಭೀಮನಗೌಡ ಜಾಲಿಹಾಳ್ ಹೇಳಿದರು.
ಅವರು ಗುರುವಾರದಂದು ಪತ್ರಿಕಾ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಅಗ್ನಿಪಥ್ ಯೋಜನೆಯು ಭಾರತದ ಸೈನ್ಯವನ್ನು ಬಲಪಡಿಸುವ ದೇಶವನ್ನು ಕಾಪಾಡುವ ದೇಶ ಸೇವೆಯೇ ಪರಮೋಚ್ಚ ಎಂದು ಬಿಂಬಿಸುವ ಯೋಜನೆಯಾಗಿದೆ. ಆದರೆ ರಾಹುಲ್‌ ಗಾಂಧಿ ಯವರು ಈ ಯೋಜನೆಯ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾರತೀಯ ಸೈನ್ಯಕ್ಕೆ ಬಲತುಂಬುತ್ತಿದ್ದಾರೆ. ಸೈನಿಕರಿಗೆ ಎಲ್ಲಾ ಸೌಕರ್ಯಗಳನ್ನು ಒದಗಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿಯೇ ಯುವ ಸೈನಿಕರು ಹೆಚ್ಚಾಗಬೇಕು ಎಂಬ ಹಿನ್ನಲೆಯಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಈಗಾಗಲೇ ಸುಮಾರು 80 ಸಾವಿರ ಯುವಕರು ಈ ಯೋಜನೆಯಲ್ಲಿ ದೇಶ ಸೇವೆ ಮಾಡುತ್ತಿದ್ದಾರೆ. ಈ ವರ್ಷದ ಅಂತ್ಯದೊಳಗೆ ಸುಮಾರು 1.75 ಲಕ್ಷ ಸೈನಿಕರು ನೇಮಕವಾಗಬಹುದಾಗಿದೆ ಎಂದರು.
ಸೈನ್ಯಕ್ಕೆ ಸೇರಬಹುದು. ಇವರಿಗೆ ತರಬೇತಿ ನೀಡಲಾಗುತ್ತಿದೆ, ಇದು 4 ವರ್ಷದ ಅವಧಿಗೆ ಇರುತ್ತದೆ. ವಾಪಾಸ್ಸು ಬಂದ ಮೇಲೆ ಡಿಗ್ರಿ ಪ್ರಮಾಣಪತ್ರ ಜೊತೆಗೆ 12 ಲಕ್ಷ ರೂ. ನಗದನ್ನು ನೀಡಲಾಗುತ್ತದೆ. ಇದರ ಜೊತೆಗೆ ಪ್ರತಿ ತಿಂಗಳು 35 ಸಾವಿರದಿಂದ 45 ಸಾವಿರದವರೆಗೆ ವೇತನ ನೀಡಲಾಗುತ್ತದೆಯೇ ಇದೊಂದು ದೇಶದ ಸೇವೆಗೆ ಜೊತೆಗೆ ಯುವಕರಲ್ಲಿ ಆರ್ಥಿಕ ಬಲವನ್ನು ತುಂಬುವ ಮಹತ್ವದ ಯೋಜನೆಯಾಗಿದೆ ಸೈನ್ಯಕ್ಕೆ ಸೇರುವ ವಯಸ್ಸನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ. ಇದುವರೆಗೂ 32 ವರ್ಷ ವಯಸ್ಸಿತ್ತು. ಆದರೆ ಈಗ ಇದನ್ನು 28 ವರ್ಷಕ್ಕೆ ಇಳಿಸಲಾಗಿದೆ. ಒಂದು ಯುವ ಸೇನೆ ಪಡೆಯೇ ಇದರಿಂದ ತಯಾರಾಗುತ್ತದೆ,ಇಂತಹ ಬಹುದೊಡ್ಡ ಮಹತ್ವದ ಯುವಕರಿಗೆ ಆಸರೆಯಾಗಿರುವ ದೇಶದ ಪ್ರೇಮ ಬೆಳೆಸುವ ಯೋಜನೆಯನ್ನು ಕಾಂಗ್ರೆಸ್ ಮುಖಂಡರು ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಮಾಧ್ಯಮ ವಕ್ತಾರ ಸೋಮಶೇಖರಗೌಡ,ಮಂಜುನಾಥ್ ನಾಡಗೌಡರ, ವಕ್ತಾರರಾದ ಮಹೇಶ್ ಹಾದಿಮನಿ ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: