ಡೆಂಗ್ಯೂ ನಿಯಂತ್ರಣದಲ್ಲಿ ಆರೋಗ್ಯ ತುರ್ತುಪರಿಸ್ಥಿತಿಯಂತೆ ಕಾರ್ಯನಿರ್ವಹಿಸಿ: ಡಿಸಿ ನಲಿನ್ ಅತುಲ್

Get real time updates directly on you device, subscribe now.

ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

: ಪ್ರಸ್ತುತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಡೆಂಗ್ಯೂ ನಿಯಂತ್ರಣದಲ್ಲಿ ಕೋವಿಡ್ ಸಮಯದಂತೆ ಆರೋಗ್ಯ ತುರ್ತುಪರಿಸ್ಥಿತಿ ಎಂದು ಪರಿಗಣಿಸಿ ಅಧಿಕಾರಿಗಳು ಕಾರ್ಯನಿರ್ವಹಿಸಿ. ಡೆಂಗ್ಯೂ ಹರಡದಂತೆ ಎಚ್ಚರ ವಹಿಸಿ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟಿçÃಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಡೆಂಗ್ಯೂ ಜ್ವರಕ್ಕೆ ನಿರ್ದಿಷ್ಟ ಔಷಧಿಗಳಿಲ್ಲ. ರೋಗಲಕ್ಷಣ ಆಧಾರಿತ ಚಿಕಿತ್ಸೆ, ಔಷಧೋಪಚಾರದ ಮೂಲಕ ರೋಗಿಯನ್ನು ಚಿಕಿತ್ಸೆಗೆ ಒಳಪಡಿಸಲಾಗುತ್ತದೆ. ಕೋವಿಡ್ ಸಮಯದಲ್ಲಿಯೂ ಇದೇ ಪರಿಸ್ಥಿತಿ ಇತ್ತು. ಆದ್ದರಿಂದ ಈಗಲೂ ಕೂಡ ಕೋವಿಡ್ ಸಮಯದಲ್ಲಿ ಕಾರ್ಯನಿರ್ವಹಿಸಿದಂತೆ ಆರೋಗ್ಯ ತುರ್ತುಪರಿಸ್ಥಿತಿ ಎಂದು ಪರಿಗಣಿಸಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಡೆಂಗ್ಯೂ ಹರಡದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.
ಡೆಂಗ್ಯೂ ಉಂಟಾಗುವಿಕೆ ಮತ್ತು ಹರಡುವಿಕೆಗೆ ಮುಖ್ಯ ಕಾರಣವಾಗುವ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸುವ ಕೆಲಸ ಮೊದಲು ಆಗಬೇಕು. ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ, ತೆರೆದ ಸಂಗ್ರಾಹಕಗಳಲ್ಲಿ ನೀರು ಸಂಗ್ರಹಣೆ ಮಾಡದಂತೆ, ಮನೆಯಲ್ಲಿ ಸೊಳ್ಳೆ ಪರದೆ, ಸೊಳ್ಳೆ ಸಿಂಪಡಕಗಳನ್ನು ಬಳಸುವಂತೆ ಸಾರ್ವಜನಿಕರಿಗೆ ಸೂಕ್ತ ರೀತಿಯಲ್ಲಿ ಮಾಹಿತಿ ನೀಡಬೇಕು. ನಗರ ಸ್ಥಳೀಯ ಸಂಸ್ಥೆಗಳಿAದ ನಿಗದಿತ ವೇಳಾಪಟ್ಟಿ ಹಾಗೂ ನಿರ್ದಿಷ್ಟ ಸಮಯದಂತೆ ಮನೆ ಮನೆಗೆ ತೆರಳಿ ಸೊಳ್ಳೆ ನಿವಾರಕ ದ್ರಾವಣವನ್ನು ಸಿಂಪಡಿಸಬೇಕು. ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿ ಕಿಟಕಿಗಳಿಗೆ ಮೆಶ್‌ಗಳನ್ನು ಅಳವಡಿಸಬೇಕು. ವಿದ್ಯಾರ್ಥಿಗಳಿಗೆ ಪೂರ್ಣ ಮೈ ಮುಚ್ಚವ ಬಟ್ಟೆ ಧರಿಸುವಂತೆ ತಿಳಿಸಬೇಕು. ವಸತಿ ನಿಲಯಗಳಿಂದ ಒಡೋಮಾಸ್ ಒದಗಿಸಬೇಕು. ವಸತಿ ನಿಲಯ, ಶಾಲೆಗಳಲ್ಲಿ ನೀರು ಸಂಗ್ರಾಹಕಗಳಿದ್ದರೆ ಅವುಗಳಿಗೆ ಲಾರ್ವಾಹಾರಿ ಮೀನುಗಳನ್ನು ಬಿಡಬೇಕು. ಈ ಮೀನುಗಳು ಲಾರ್ವಾಗಳನ್ನೇ ಸೇವಿಸುವುದರಿಂದ ಸೊಳ್ಳೆಗಳ ಉತ್ಪತ್ತಿ ಮತ್ತು ಬೆಳವಣಿಗೆಯನ್ನು ನಿಯಂತ್ರಿಸುತ್ತವೆ. ಸಾಧ್ಯವಿದ್ದಲ್ಲಿ ಸಾರ್ವಜನಿಕರ ಮನೆಗಳಲ್ಲಿಯೂ ಲಾರ್ವಾಹಾರಿ ಮೀನುಗಳನ್ನು ಬಳಸಬಹುದು ಎಂದು ಅವರು ತಿಳಿಸಿದರು.
ಶಾಲಾ ಕಾಲೇಜುಗಳಲ್ಲಿ ಡೆಂಗ್ಯೂ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು.  ಇದಕ್ಕಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ, ರಸಪ್ರಶ್ನೆ, ಭಾಷಣ ಸ್ಪರ್ಧೆಗಳನ್ನು ಆಯೋಜಿಸಬಹುದು. ಶಾಲಾ ವಿದ್ಯಾರ್ಥಿಗಳಿಂದ ಗ್ರಾಮಗಳಲ್ಲಿ ಜಾಥಾ ಹಮ್ಮಿಕೊಳ್ಳಬೇಕು. ವಿದ್ಯಾರ್ಥಿಗಳ ಗುಂಪುಗಳನ್ನು ರಚಿಸಿ, ಅವರ ನೇತೃತ್ವದಲ್ಲಿ ಗ್ರಾಮದಲ್ಲಿ ಡೆಂಗ್ಯೂ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಸ್ಥಳೀಯ ಪಿಡಿಒ ಗಳು ಪ್ರತಿ ವಾರಕ್ಕೊಮ್ಮೆ ಆರೋಗ್ಯ ಸಭೆಯನ್ನು ನಡೆಸಿ, ಡೆಂಗ್ಯೂ ಹರಡದಂತೆ ಗ್ರಾಮದಾದ್ಯಂತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಚರಂಡಿಗಳಲ್ಲಿ ಹುದುಗಿರುವ ಹೂಳನ್ನು ನಿಯಮಿತವಾಗಿ ಎತ್ತಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಹಳ್ಳಿಗಳಲ್ಲಿ ಘನತ್ಯಾಜ್ಯ ವಸ್ತುಗಳ ಸೂಕ್ತ ವಿಲೇವಾರಿ ಮಾಡಬೇಕು. ಡೆಂಗ್ಯೂ/ಚಿಕುನ್‌ಗುನ್ಯಾದAತಹ ರೋಗಗಳು ವರದಿಯಾದ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕೂಡಲೇ ಒಳಾಂಗಣ ಧೂಮೀಕರಣ (Iಟಿಜooಡಿ ಜಿoggiಟಿg) ಕಾರ್ಯಕೈಗೊಳ್ಳಬೇಕು. ಅಂಗನವಾಡಿಗಳು, ಶಾಲೆಗಳು ಹಾಗೂ ವಸತಿ ನಿಲಯಗಳನ್ನು ಸೊಳ್ಳೆ ಮುಕ್ತ ಹಾಗೂ ಡೆಂಗ್ಯೂ ಮುಕ್ತಗೊಳಿಸಬೇಕು. ಮಕ್ಕಳು, ವಯಸ್ಕರು ಅಥವಾ ವಯೋವೃದ್ದರು ಎಂಬ ಭೇದವಿಲ್ಲದೆ ಡೆಂಗ್ಯೂ ತೀವ್ರವಾಗಿ ಹರಡುವುದರಿಂದ ರೋಗಲಕ್ಷಣಗಳ ಕುರಿತು ಜನರಿಗೆ ಅರಿವು ಮೂಡಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ವೆಂಕಟೇಶ್ ಅವರು ಮಾತನಾಡಿ, ಡೆಂಗ್ಯೂ ಜ್ವರದ ಲಕ್ಷಣಗಳಾದ ನಿರಂತರ ಹಾಗೂ ತೀವ್ರ ಜ್ವರ, ತಲೆಸುತ್ತು, ವಾಂತಿಯAತಹ ಲಕ್ಷಣಗಳು ಕಂಡುಬAದ ಕೂಡಲೇ ಹತ್ತಿರದ ಆಸ್ಪತ್ರೆಗೆ ತೆರಳಿ ಸೂಕ್ತ ತಪಾಸಣೆ ಮಾಡಿಸಬೇಕು. ನಿರ್ಲಕ್ಷö್ಯ ವಹಿಸಿದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ದಿಢೀರ್ ಕುಸಿದು, ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ವಸಡುಗಳಲ್ಲಿ ರಕ್ತಸ್ರಾವ, ಕಡಿಮೆ ರಕ್ತದೊತ್ತಡ, ಅಂಗಾAಗ ವೈಫಲ್ಯ ಕೂಡ ಸಂಭವಿಸಬಹುದು. ಆದ್ದರಿಂದ ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಿ, ಮನೆಯ ಹಾಗೂ ಸುತ್ತಲಿನ ವಾತಾವರಣದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
2024 ರ ಜುಲೈ ಮಾಹೆಯವರೆಗಿನ ಡೆಂಗ್ಯೂ ಹಾಗೂ ಚಿಕುನ್‌ಗುನ್ಯಾ ದತ್ತಾಂಶ:
2024ನೇ ಸಾಲಿನಲ್ಲಿ ಜುಲೈವರೆಗೂ ಜಿಲ್ಲೆಯಾದ್ಯಂತ 2,435 ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಅವುಗಳಲ್ಲಿ 131 ಡೆಂಗ್ಯೂ ಜ್ವರ ಪ್ರಕರಣಗಳು ದೃಢಪಟ್ಟಿವೆ. ಚಿಕುನ್‌ಗುನ್ಯಾಗೆ ಸಂಬAಧಿಸಿದAತೆ 411 ಮಾದರಿಗಳನ್ನು ಸಂಗ್ರಹಿಸಲಾಗಿದ್ದು, 10 ಪ್ರಕರಣಗಳು ದೃಢಪಟ್ಟಿವೆ. ತಾಲ್ಲೂಕುವಾರು ದತ್ತಾಂಶ ಸಂಗ್ರಹದಲ್ಲಿ ಜುಲೈ ಮಾಹೆಯವರೆಗೂ ಕೊಪ್ಪಳ ತಾಲ್ಲೂಕಿನಲ್ಲಿ  1,477 ಮಾದರಿ ಸಂಗ್ರಹ ಪರೀಕ್ಷೆಯಲ್ಲಿ 50 ಪ್ರಕರಣಗಳು, ಗಂಗಾವತಿ ತಾಲ್ಲೂಕಿನಲ್ಲಿ 208 ಮಾದರಿಗಳಲ್ಲಿ 33  ಪ್ರಕರಣಗಳು, ಕುಷ್ಟಗಿ ತಾಲ್ಲೂಕಿನಲ್ಲಿ 288 ಮಾದರಿಗಳಲ್ಲಿ 11 ಪ್ರಕರಣಗಳು, ಯಲಬುರ್ಗಾ ತಾಲ್ಲೂಕಿನಲ್ಲಿ 462 ಮಾದರಿಗಳಲ್ಲಿ 37 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ಚಿಕುನ್‌ಗುನ್ಯಾಗೆ ಸಂಬAಧಿಸಿದAತೆ ಕೊಪ್ಪಳ ತಾಲ್ಲೂಕಿನಲ್ಲಿ 238 ಮಾದರಿ ಸಂಗ್ರಹ ಪರೀಕ್ಷೆಯಲ್ಲಿ 5 ಪ್ರಕರಣಗಳು, ಗಂಗಾವತಿ ತಾಲ್ಲೂಕಿನಲ್ಲಿ 51 ಮಾದರಿಗಳಲ್ಲಿ 1 ಪ್ರಕರಣ, ಕುಷ್ಟಗಿ ತಾಲ್ಲೂಕಿನಲ್ಲಿ 29 ಮಾದರಿಗಳಲ್ಲಿ 4 ಪ್ರಕರಣಗಳು ದೃಢಪಟ್ಟಿವೆ. ಯಲಬುರ್ಗಾ ತಾಲ್ಲೂಕಿನಲ್ಲಿ 93 ಮಾದರಿಗಳ ಸಂಗ್ರಹವನ್ನು ಪರೀಕ್ಷೆ ಮಾಡಲಾಗಿದ್ದು, ಯಾವುದೇ ಪ್ರಕರಣ ದೃಢಪಟ್ಟಿಲ್ಲ. ಜಿಲ್ಲೆಯಾದ್ಯಂತ ಒಟ್ಟು 41 ಚಿಕುನ್‌ಗುನ್ಯಾ ಮಾದರಿ ಸಂಗ್ರಹ ಪರೀಕ್ಷೆಯಲ್ಲಿ 10 ಪ್ರಕರಣಗಳು ದೃಢಪಟ್ಟಿವೆ ಎಂದು ಡಾ.ವೆಂಕಟೇಶ್ ಮಾಹಿತಿ ನೀಡಿದರು.
ಇದೇ ಸಂದರ್ಭ ಜಿಲ್ಲಾ ಏಡ್ಸ್ ನಿಯಂತ್ರಣ, ಜಿಲ್ಲಾ ಗುಣಮಟ್ಟ ಭರವಸೆ ಸಮಿತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜು ಟಿ., ಡಿಎಸ್‌ಒ ಡಾ.ನಂದಕುಮಾರ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರನಾಥ ಎಂ.ಎಚ್., ಡಿಟಿಒ ಡಾ.ಶಶಿಧರ ಎ., ಡಿಎಲ್‌ಒ ಡಾ.ಪ್ರಕಾಶ ಎಚ್. ಸಿಎಂಒ ಡಾ.ಈಶ್ವರ ಸವಡಿ, ಕಿಮ್ಸ್ ಎಚ್‌ಒಡಿ ಡಾ.ನಾರಾಯಣ, ನಗರಸಭೆ ಪೌರಾಯುಕ್ತರಾದ ಗಣಪತಿ ಪಾಟೀಲ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಇತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: