ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಶಿಕ್ಷೆ

Get real time updates directly on you device, subscribe now.

 : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಬಸವರಾಜ ಮುದ್ಲಾಪೂರ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೊ)ವು ಆರೋಪಿಗೆ ಶಿಕ್ಷೆ ವಿಧಿಸಿದೆ.
2022ರ ಮಾರ್ಚ್ 20ರಂದು ಕುಕನೂರ ಪೊಲೀಸ್ ಠಾಣೆ ವ್ಯಾಪ್ತಿಯ ಲಕಮಾಪುರ ಗ್ರಾಮದ ಬಾಧಿತಳ  ತಾಯಿಯ ಮನೆಯಿಂದ ಆರೋಪಿ ಬಸವರಾಜ ಇತನು ಬಾಧಿತಳನ್ನು ಪುಸಲಾಯಿಸಿ ಅಪಹರಿಸಿಕೊಂಡು ಹೋಗಿ ರಾತ್ರಿ 8.30 ಗಂಟೆ ಸುಮಾರಿಗೆ ಲಕಮಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮುಂದಿರುವ ಓಣಿಯ ಒಂದು ಪಾಳು ಬಿದ್ದ ಮನೆಯ ಮುಂದೆ ರಸ್ತೆಯ ಮೇಲೆ ಬಾಧಿತಳು ಅಪ್ರಾಪ್ತಳು ಎಂಬುದು ಗೊತ್ತಿದ್ದರೂ ಅವಳಿಗೆ ಬಲವಂತದ ಅತ್ಯಾಚಾರ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕುಕನೂರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆಯನ್ನು ಯಲಬುರ್ಗಾ ಸಿಪಿಐ ಎಂ.ನಾಗರೆಡ್ಡಿ ಅವರು ನಿರ್ವಹಿಸಿದ್ದು, ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಮೇಲ್ನೋಟಕ್ಕೆ ಸಾಭಿತಾಗಿದ್ದರಿಂದ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣವು ಸ್ಪೇ.ಎಸ್‌ಸಿ(ಪೋಕ್ಸೊ) ಸಂ: 26/2022 ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಆರೋಪಿ ಬಸವರಾಜ ಮುದ್ಲಾಪುರ ಇತನ ಮೇಲಿನ ಆರೋಪಣೆಗಳು ಸಾಭೀತಾಗಿವೆ ಎಂದು 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 20,000 ಗಳ ದಂಡವನ್ನುಭರಿಸುವಂತೆ ಆದೇಶಿಸಿ, ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ(ಪೋಕ್ಸೊ) ಕುಮಾರ ಡಿ.ಕೆ ಅವರು 2024ರ ಜುಲೈ 30ರಂದು ತೀರ್ಪು ಹೊರಡಿಸಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮದೇಸಾಯಿ ಅವರು ಈ ಪ್ರಕರಣ ನಡೆಸಿ ವಾದ ಮಂಡಿಸಿದ್ದರು ಎಂದು ಹೆಚ್ದುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!
%d bloggers like this: