ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಘೋಷಣೆ ಮಾಡಿದ ಸಚಿವ ಶಿವರಾಜ ತಂಗಡಗಿ

Get real time updates directly on you device, subscribe now.


ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಇಂದು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕರಾಗಿ  ಸತೀಶ್ ತಿಪಟೂರು,

ಧಾರವಾಡ ರಂಗಾಯಣದ ನಿರ್ದೇಶಕರಾಗಿ   ರಾಜು ತಾಳಿಕೋಟೆ .

ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ  ಪ್ರಸನ್ನ ಡಿ ಸಾಗರ.

ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ  ಸುಜಾತ ಜಂಗಮ ಶೆಟ್ಟಿ.

ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ ಗೆ ನಿರ್ದೇಶಕರಾಗಿ   ಮಲ್ಲಿಕಾರ್ಜುನ ಕಡಕೋಳ.

ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ   ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡ ಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲ್ಯಾಗಿದೆ,, ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು

Get real time updates directly on you device, subscribe now.

Comments are closed.

error: Content is protected !!
%d bloggers like this: