ತುಂಗಭದ್ರಾ ಅಣೆಕಟ್ಟಿನ ಎಡಭಾಗ, ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ನಿಷೇದಾಜ್ಞೆ ಜಾರಿ

Get real time updates directly on you device, subscribe now.

: ತುಂಗಭದ್ರಾ ಅಣೆಕಟ್ಟಿನ ಎಡಭಾಗ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ತುಂಗಭದ್ರಾ ಜಲಾಶಯದ ರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ ಆಗಸ್ಟ್ 11 ರಿಂದ ಆ.20ರ ಮಧ್ಯರಾತ್ರಿಯವರೆಗೆ ತುಂಗಭದ್ರಾ ಜಲಾಶಯದ ಡೌನ್ ಸ್ಟೀಮ್‌ನಲ್ಲಿರುವ ಲೋವರ್ ಬ್ರಿಡ್ಜ್ ಮತ್ತು ತುಂಗಭದ್ರಾ ಅಣೆಕಟ್ಟಿನ ಕೆಳಭಾಗದಲ್ಲಿ ಬರುವ ಎಲ್ಲಾ ಗ್ರಾಮಗಳ ಸುತ್ತಮುತ್ತಲಿನ 100 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: