ಸೆಪ್ಟೆಂಬರ್ 15ರಂದು ಜಿಲ್ಲೆಯಲ್ಲಿ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಚಾರಣೆ: ಅಗತ್ಯ ಸಿದ್ಧತೆಗೆ ಸೂಚನೆ

Get real time updates directly on you device, subscribe now.

ಕೊಪ್ಪಳ ): ಕೊಪ್ಪಳ ಜಿಲ್ಲೆಯಲ್ಲಿ ಸೆಪ್ಟೆಂಬರ್ 15ರಂದು ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಚಾರಣೆಯನ್ನು ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಚಾರಣೆ ಆಚರಿಸುವ ಕುರಿತು ಜಿ.ಪಂ ಸಮಿತಿ ಕೊಠಡಿ ಸಭಾಂಗಣದಲ್ಲಿ ಆಗಸ್ಟ್ 29ರಂದು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಚಾರಣೆಯನ್ನು ಜಿಲ್ಲೆಯ ಎಲ್ಲಾ ಇಲ್ಲಾಖೆಗಳು ಸಹಭಾಗಿತ್ವದೊಂದಿಗೆ ಉತ್ತಮವಾಗಿ ಆಚರಣೆ ಮಾಡಬೇಕು. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೊಂಪೂರ ಹೆದ್ದಾರಿಯಿಂದ ಮುನಿರಾಬಾದ್ ಡ್ಯಾಂ ರಾಷ್ಟ್ರೀಯಾ ಹೆದ್ದಾರಿ ವಿಜಯ ನಗರ ಜಿಲ್ಲೆಯ ಗಡಿಭಾಗದವರೆಗೆ 60000 ಜನರನ್ನು ಒಳಗೊಂಡAತೆ ಮಾನವ ಸರಪಳಿಯನ್ನು ರಚನೆ ಮಾಡಲು ಸೂಕ್ತ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಚಾರಣೆಯ ಮಹತ್ವವನ್ನು ಬಿಂಬಿಸುವ ಚಿತ್ರಗಳನ್ನು, ಸಂವಿಧಾನ ಪುಸ್ತಕದ ಚಿತ್ರಣವನ್ನು, ಪ್ರಸ್ಥಾವನೆಯನ್ನು ಕ್ರೀಡಾಂಗಣದಲ್ಲಿ ಜಿಲ್ಲೆಯ ಚಿತ್ರಕಲಾ ಶಿಕ್ಷಕರಿಂದ ಬರೆಸಲು ಡಿ.ಡಿ.ಪಿ.ಐ ಹಾಗೂ ಸಹಾಯಕ ನಿರ್ದೇಶಕರು ಯುವಜನ ಮತ್ತು ಕ್ರೀಡಾ ಇಲಾಖೆಯವರು ಕ್ರಮವಹಿಸಬೇಕು. ನಗರದ ಹೃದಯ ಭಾಗದ ಅಶೋಕ ವೃತ್ತದಲ್ಲಿ ಸಂವಿಧಾನದ ಪ್ರಸ್ತಾವನೆ ಬೋದನೆಗೆ ಸೂಕ್ತ ವೇದಿಕೆ ನಿರ್ಮಾಣ ಮಾಡಲು ತಹಶಿಲ್ದಾರ ಕೊಪ್ಪಳ ಕ್ರಮ ಕೈಗೊಳ್ಳಬೇಕು. ಪ್ರತಿಯೊಂದು ಹಂತದಲ್ಲಿ ಕಾರ್ಯಕ್ರಮದ ರೂಪರೇಷಗಳ ಕುರಿತು ಚರ್ಚಿಸಿ, ಎಲ್ಲಾ ಇಲಾಖೆಗಳ ಜವಬ್ದಾರಿಗಳ ಬಗ್ಗೆ ಹಾಗೂ ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿ.ಪಂ ಸಿಇಓ ಅವರು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿ.ಪಂ ಕೊಪ್ಪಳ ಉಪ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಜಗದೀಶ್ ಜಿ.ಹೆಚ್., ಸಮಾಜ ಕಾಲ್ಯಾಣ ಇಲಾಖೆ,ಉಪ ನಿರ್ದೇಶಕರಾದ ರಾಜು ತಳವಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕರಾದ ಶ್ರೀಶೈಲ ಬಿರಾದಾರ, ಕೊಪ್ಪಳ ತಹಶೀಲ್ದಾರರಾದ ವಿಠ್ಠಲ ಚೌಗಲಾ, ತಾಲೂಕು, ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ ಸೇರಿದಂತೆ ನಗರ ಸಭೆಯ ಹಾಗೂ ಭಾಗ್ಯನಗರ ಪಟ್ಟಣ ಪಂಚಾಯತ್ ಅಧಿಕಾರಿಗಳು, ಕೊಪ್ಪಳ ತಾಲೂಕು  ಬಿ.ಇ.ಒ ಮತ್ತು ಇತರೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: