ಕೊಪ್ಪಳ ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ
: ಕರ್ನಾಟಕ ಸರ್ಕಾರದ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿದ್ದು, ಈ ವ್ಯವಸ್ಥೆಯನ್ನು ಕೊಪ್ಪಳ ಜಿಲ್ಲೆಯ ಉಪನೋಂದಣಿ ಕಛೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.ಉದಾಹರಣೆಗೆ: ಕೊಪ್ಪಳ ನಗರದ ಆಸ್ತಿಯನ್ನು ಮಾರಾಟ ಅಥವಾ ಖರೀದಿ ಮಾಡಲು ಜಿಲ್ಲೆಯ ತಾಲೂಕು, ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ ಮತ್ತು ಕಾರಟಗಿ ಉಪನೋಂದಣಿ ಕಛೇರಿಗಳ ಪೈಕಿ ಯಾವುದೇ ಉಪನೋಂದಣಿ ಕಛೇರಿಗಳಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳಬಹುದಾಗಿರುತ್ತದೆ.
ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಪಾಟ್ ಲಭ್ಯವಿರುವಂತಹ ಕಛೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳುವAತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.