ಗಂಗಾವತಿಯಲ್ಲಿ ಪ್ರಥಮ ಬಾರಿಗೆ ಯುವ ಸಂಭ್ರಮ-ರಮೇಶ ಗಬ್ಬೂರು  

0

Get real time updates directly on you device, subscribe now.


ಗಂಗಾವತಿ.12 ಇಂದು ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯ ರಮೇಶ ಗಬ್ಬೂರು
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ದಿನಾಂಕ: 14.09.2024 ರಂದು ಮಧ್ಯಾಹ್ನ 2 ಗಂಟೆಗೆ ಐ.ಎಮ್.ಎ.ಹಾಲ್, ಗಂಗಾವತಿಯಲ್ಲಿ ಯುವ ಸಂಭ್ರಮ- ಸಂಗೀತ ನೃತ್ಯೋತ್ಸವ ಕಾರ್ಯಕ್ರಮವನ್ನು ಸದಸ್ಯ ಸಂಚಾಲಕರಾದ ಶ್ರೀ ರಮೇಶ್ ಗನ್ನೂರು ಅವರ ಸಂಚಾಲಕತ್ವದಲ್ಲಿ ಹಮ್ಮಿಕೊಂಡಿದೆ.
ಸದರಿ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಜೆ 4 ಗಂಟೆಗೆ ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ನೆರವೇರಿಸಿಕೊಡುವರು. ಮುಖ್ಯ ಅತಿಥಿಗಳಾಗಿ ಗಂಗಾವತಿ ವಿಧಾನ ಸಭಾ ಕ್ಷೇತ್ರದ ಶಾಸಕ ಗಾಲಿ ಜರ್ನಾಧನ ರೆಡ್ಡಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷ ಶುಭ ಧನಂಜಯ ಮುಖ್ಯ ಅತಿಥಿಗಳು ಭಾಗವಹಿಸಲಿದ್ದಾರೆ. ಇದರೊಂದಿಗೆ ಆಹ್ವಾನಪತ್ರಿಕೆ ಯನ್ನು ಲಗತ್ತಿಸಿದೆ. ಸ್ವೀಕರಿಸಿ.ಆಯೋಜಿಸಲಾಗಿದೆ. ಮಧ್ಯಾಹ್ನ 2 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: