ವಿಜಯಪುರ ಜಿಲ್ಲೆಯ ಜೆಡಿ (ಎಸ್) ಉಸ್ತುವಾರಿಯಾಗಿ ಸಿವಿಸಿ ನೇಮಕ
“ಪಕ್ಷವು ನನ್ನ ಮೇಲೆ ಭರವಸೆ ಇಟ್ಟು ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹಾಗೂ ಎಲ್ಲರೊಡನೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಇಡೀ ವಿಜಯಪುರ ಜಿಲ್ಲೆಯಲ್ಲಿ ಜೆಡಿ (ಎಸ್) ಪಕ್ಷವನ್ನು ಅತ್ಯಂತ ಪ್ರಬಲ ಪಕ್ಷವನ್ನಾಗಿಸಲು ಹಗಲಿರುಳು ಶ್ರಮಿಸುತ್ತೇನೆ. ಈ ನಿಟ್ಟಿನಲ್ಲಿ ಈಗಾಗಲೇ ಕ್ರಿಯಾ ಯೋಜನೆಯೊಂದನ್ನು ಸಿದ್ಧಪಡಿಸಿಕೊಂಡಿರುವೆ. ಈ ಜವಾಬ್ದಾರಿ ನೀಡಿದ ಪಕ್ಷದ ನಾಯಕರಿಗೆ ನಾನು ಅಭಾರಿಯಾಗಿದ್ದೇನೆ,” ಸಿ ವಿ ಚಂದ್ರಶೇಖರ್