ಕರ್ನಾಟಕ ವಿಧಾನಮಂಡಲದ ಎಸ್‌ಸಿ., ಎಸ್‌ಟಿ ಕಲ್ಯಾಣ ಸಮಿತಿಯಿಂದ ಕಲಬುರಗಿ ವಿಭಾಗದಲ್ಲಿ ಪ್ರವಾಸ

0

Get real time updates directly on you device, subscribe now.

 ): ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ ಅವರ ನೇತೃತ್ವದ ವಿವಿಧ ಸದಸ್ಯರನ್ನೊಳಗೊಂಡ ಸಮಿತಿಯು ಸೆಪ್ಟೆಂಬರ್ 25 ರಿಂದ ಸೆ.27ರವರೆಗೆ ಕಲಬುರಗಿ ವಿಭಾಗದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ ಎಂದು ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ತಿಳಿಸಿದ್ದಾರೆ.
ಈ ಸಮಿತಿಯು ಕಲಬುರಗಿ ವಿಭಾಗದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ಅಭಿವೃದ್ಧಿ, ಕಲ್ಯಾಣ, ಏಳಿಗೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದೆ.
ಸಮಿತಿಯು ಸೆ.25ರಂದು ಕಲಬುರಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಗಳಿಗೆ ಸಂಬAಧಿಸಿದAತೆ, ಸೆ.26ರಂದು ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಿಗೆ ಸಂಬAಧಿಸಿದAತೆ ಹಾಗೂ ಸೆ.27ರಂದು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಿಗೆ ಸಂಬAಧಿಸಿದAತೆ ಸಭೆ ನಡೆಸಲಿದೆ.
ಸಮಿತಿಯಲ್ಲಿ ಸದಸ್ಯರಾದ ಬಿ.ಜಿ. ಗೋವಿಂದಪ್ಪ, ಐಹೊಳೆ ದುರ್ಯೋಧನ ಮಹಾಲಿಂಗಪ್ಪ, ಅಬ್ಬಯ್ಯ ಪ್ರಸಾದ, ಎಸ್.ಎನ್. ನಾರಾಯಣಸ್ವಾಮಿ ಕೆ.ಎಂ., ಮಾನಪ್ಪ ಡಿ. ವಜ್ಜಲ, ಬಸನಗೌಡ ದದ್ದಲ, ಅನಿಲ್ ಚಿಕ್ಕಮಾದು, ಬಸವರಾಜ್ ಮತ್ತಿಮೂಡ್, ಎನ್. ಶ್ರೀನಿವಾಸಯ್ಯ, ಕೆ.ಸಿ. ವೀರೇಂದ್ರ ಪಪ್ಪಿ, ಪ್ರಕಾಶ ಕೋಳಿವಾಡ, ಕೃಷ್ಣ ನಾಯಕ, ಸಿಮೆಂಟ್ ಮಂಜು, ಶ್ರೀಮತಿ ಕರೆಮ್ಮ, ಶಾಂತರಾಮ್ ಬುಡ್ನ ಸಿದ್ದಿ, ರಾಜೇಂದ್ರ ರಾಜಣ್ಣ, ವೈ.ಎಂ. ಸತೀಶ್ ಹಾಗೂ ಜಗದೇವ್ ಗುತ್ತೇದಾರ್ ಅವರು ಇದ್ದಾರೆ.
ಸಮಿತಿಯು ಈ ಹಿಂದೆ ಸೆಪ್ಟೆಂಬರ್ 19 ರಿಂದ ಸೆಪ್ಟೆಂಬರ್ 21ರವರೆಗೆ ಹಮ್ಮಿಕೊಂಡಿದ್ದ ಪ್ರವಾಸವು ಕಾರಣಾಂತರಗಳಿAದ ಮುಂದೂಡಲಾಗಿದ್ದು, ಈಗ ಸೆ.25 ರಿಂದ ಸೆ.27ರವರೆಗೆ ಪ್ರವಾಸ ಕೈಗೊಂಡಿರುತ್ತದೆ.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: