ತಂಬಾಕು ಪದಾರ್ಥ ಮಾರಾಟ ಅಂಗಡಿಗಳ ಮೇಲೆ ದಾಳಿ; 21 ಪ್ರಕರಣ ದಾಖಲಿಸಿ ಬಿಸಿಮುಟ್ಟಿಸಿದ ಅಧಿಕಾರಿಗಳು
: ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಪೊಲೀಸ್ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಯು ಸೆ.25ರಂದು ನಗರದ ವಿವಿಧೆಡೆ ದಾಳಿ ನಡೆಸಿ 21 ಪ್ರಕರಣಗಳನ್ನು ದಾಖಲಿಸಿ ಬಿಸಿಮುಟ್ಟಿಸಿದರು.ನಗರದ ಜಿಲ್ಲಾ ಸರಕಾರಿ ಆಸ್ಪತ್ರೆ, ಆರ್.ಟಿ.ಓ ಕಚೇರಿ ಸೇರಿದಂತೆ ವಿವಿಧೆಡೆ ಸಂಚರಿಸಿದ ಅಧಿಕಾರಿಗಳು ತಂಬಾಕು ಅಥವಾ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ಕೊಟ್ಟಾ-2003 ಕಾಯ್ದೆಯ ಸೆಕ್ಷನ್:4ರಡಿಯಲ್ಲಿ 21 ಪ್ರಕರಣಗಳನ್ನು ದಾಖಲಿಸಿ 3,600 ರೂ ದಂಡ ಹಾಕಿದರು.
ಕಾರ್ಯಾಚರಣೆಯಲ್ಲಿ ಜಿಲ್ಲಾ ಸಲಹೆಗಾರರಾದ ಡಾ.ನಾಗೇಂದ್ರ, ಸಮಾಜ ಕಾರ್ಯಕರ್ತರಾದ ಸರಸ್ವತಿ, ಆಪ್ತ ಸಮಾಲೋಚಕರಾದ ಶಾಂತಾ ಕಟ್ಟಿಮನಿ ಸೇರಿದಂತೆ ಇತರರು ಇದ್ದರು.
Comments are closed.