ಕ್ರೀಡೆಗಳು ಸದೃಢ ಆರೋಗ್ಯಕ್ಕೆ ಅವಶ್ಯ :  ರಾಘವೇಂದ್ರ ಹಿಟ್ನಾಳ

0

Get real time updates directly on you device, subscribe now.


ಕೊಪ್ಪಳ, :-ಕ್ರೀಡೆಗಳು ಸದೃಢ ಆರೋಗ್ಯಕ್ಕೆ ಅತ್ಯವಶ್ಯವಾಗಿ ಬೇಕಾಗುತ್ತವೆ. ಸದಾ ಕ್ರೀಡೆ, ವ್ಯಾಯಾಮ ಚಟುವಟಿಕೆಗಳಿಂದ ಕೂಡಿರುವ ವಿದ್ಯಾರ್ಥಿಗಳು ಸದೃಢ ಆರೋಗ್ಯ ಮತ್ತು ಮಾನಸಿಕ ಸ್ಥಿಮಿತತೆಯನ್ನು ಕಾಪಾಡಿಕೊಳ್ಳುತ್ತಾರೆ ಎಂದು ಶಾಸಕರಾದ   ರಾಘವೇಂದ್ರ ಹಿಟ್ನಾಳರವರು ನುಡಿದರು. ಅವರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪೂಜ್ಯ ಶ್ರೀ ಮರಿಶಾಂತವೀರ ಸ್ವಾಮೀಜಿ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ನಡೆದ ೨೦೨೪-೨೫ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಮುಂದುವರೆದು ನಮ್ಮ ಭಾಗದಲ್ಲಿ ಇರುವ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಸಹ ಭಾಗವಹಿಸುವ ಪ್ರತಿಭೆಯುಳ್ಳವರಾಗಿದ್ದಾರೆ. ಅವರು ಸದಾ ಪ್ರಯತ್ನಶೀಲರಾದರೆ ಅದು ಸಾಧ್ಯವಾಗಬಹುದೆಂದು ಅಭಿಪ್ರಾಯಪಟ್ಟರು.

ಮತ್ತೋರ್ವ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕರವರು ಇತ್ತೀಚಿನ ದಿನಮಾನಗಳಲ್ಲಿ ವಿದ್ಯಾರ್ಥಿನಿಯರು ಕ್ರೀಡೆಗಳಲ್ಲಿ ಹೆಚ್ಚು-ಹೆಚ್ಚು ಭಾಗವಹಿಸುವಿಕೆ ಕಂಡುಬರುತ್ತಿರುವುದು ಸಂತಸದ ಸಂಗತಿ. ಮೊನ್ನೆ ನಡೆದ ಓಲಂಪಿಕ್ಸ್ ಸ್ಪರ್ಧೆಯಲ್ಲಿ ಮಹಿಳೆಯರು ಶೂಟಿಂಗ್ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತಕ್ಕೆ ಕಂಚು ಗೆದ್ದುಕೊಟ್ಟಿದ್ದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಪ್ರಾಚಾರ್ಯರಾದ ರಾಜಶೇಖರ ಪಾಟೀಲರವರು ವಹಿಸಿಕೊಂಡು ಮಾತನಾಡುತ್ತಾ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಎಲ್ಲಾ ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಅನೀಲಕುಮಾರ ಜಿ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸೋಮಶೇಖರಗೌಡ, ಕಾರ್ಯಧ್ಯಕ್ಷರಾದ ಮಾರುತಿ ಲಕಮಾಪುರ, ಖಜಾಂಚಿಗಳಾದ ಸಂಜಯ ಬಡಿಗೇರ, ಪ್ರಾಚಾರ್ಯರಾದ ಟಿ.ಸಿ ಶಾಂತಪ್ಪ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಬಸವರಾಜ ಎ, ಪತ್ರಕರ್ತರಾದ ಹನುಮಂತ ಹಳ್ಳಿಕೇರಿ, ಸಮಾಜ ಸೇವಕ ಶರಣಪ್ಪ ಸಜ್ಜನ್, ಪ್ರಾಚಾರ್ಯರುಗಳಾದ ಡಾ.ವೀರೇಶಕುಮಾರ ಎನ್.ಎಸ್ ಮತ್ತು ಅಗಸ್ಟಿನ್ ಎಸ್, ಕಾಲೇಜಿನ ಶೈಕ್ಷಣಿಕ ಸಂಯೋಜಕರಾದ ಶರಣಪ್ಪ ಎ.ಜಿ, ಹಿರಿಯ ಉಪನ್ಯಾಸಕರಾದ ರಾಚಪ್ಪ ಕೇಸರಭಾವಿ, ಜಿಲ್ಲಾ ಕ್ರೀಡಾ ಸಂಚಾಲಕರಾದ ತಿರುಪತಿ ನಾಯಕ ಹಾಗೂ ಕ್ರೀಡಾ ಸಂಘಟಕರಾದ ಈಶಪ್ಪ ದೊಡ್ಡಮನಿ ಮುಂತಾದವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ಪ್ರಾರಂಭದಲ್ಲಿ ಉಪನ್ಯಾಸಕರಾದ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್‌ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಮಂಜುನಾಥ ಬಡಿಗೇರರವರು ಸ್ವಾಗತಿಸಿದರೆ, ಕೊನೆಗೆ   ಹನುಮೇಶ ಚೌಡ್ಕಿಯವರು ವಂದಿಸಿದರು.  ಅಶೋಕ ಓಜಿನಹಳ್ಳಿಯವರು ಈ ಕಾರ್ಯಕ್ರಮವನ್ನು ನಿರ್ವಹಿಸಿದರು. ಈ ಕ್ರೀಡಾಕೂಟದಲ್ಲಿ ಜಿಲ್ಲೆಯ ಏಳು ತಾಲೂಕಿನ ಪದವಿ ಪೂರ್ವ ಕಾಲೇಜುಗಳ ಸುಮಾರು ೨೦೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಸೆ.೨೬ರಂದು ವಿದ್ಯಾರ್ಥಿನಿಯರಿಗೆ, ಸೆ.೨೭ರಂದು ವಿದ್ಯಾರ್ಥಿಗಳಿಗೆ ಮತ್ತು ಸೆ.೨೮ರಂದು ವಿಶೇಷ ಪಂದ್ಯಾಟಗಳನ್ನು ನಡೆಸಲಾಗುತ್ತದೆ.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: