ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸಮುದಾಯದ ಸಹಕಾರ ಅಗತ್ಯ: ಪ್ರಕಾಶ ತಗಡಿನಮನಿ

Get real time updates directly on you device, subscribe now.


ಕೊಪ್ಪಳ: ಶೈಕ್ಷಣಿಕವಾಗಿ ಪ್ರಗತಿಯನ್ನು ಸಾಧಿಸಬೇಕಾದರೆ ಸಮುದಾಯದ ಸಹಕಾರದಿಂದ ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪ್ರಕಾಶ ತಗಡಿನಮನಿ ಹೇಳಿದರು.
ಅವರು ತಾಲೂಕಿನ ಚುಕನಕಲ್ಲು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಬಹದ್ದೂಬಂಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ,ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿಯನ್ನು ಸಾಧಿಸಬೇಕಾದರೆ ಸಮುದಾಯಗಳ ಸಹಕಾರ ಅಗತ್ಯವಿದೆ.ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಆಯೋಜನೆಯನ್ನು ಮಾಡಲು ಇಲಾಖೆಯಿಂದ ಕಡಿಮೆ ಅನುದಾನ ಬಂದಿರುತ್ತದೆ.ಆದರೆ ಕಡಿಮೆ ಅನುದಾನ ಇದ್ದರೂ ಕೂಡಾ ಗ್ರಾಮೀಣ ಭಾಗದಲ್ಲಿ ನಡೆಯುವ ಪ್ರತಿಭಾ ಕಾರಂಜಿಗೆ ಅನೇಕ ದಾನಿಗಳು ಹಣವನ್ನು ನೀಡುವ ಮೂಲಕ ಹಬ್ಬದ ವಾತಾವರಣವನ್ನು ನಿರ್ಮಾಣ ಮಾಡುತ್ತಾರೆ.ಶಿಕ್ಷಕರಾದವರು ಹೆಚ್ಚು ಹೆಚ್ಚು ಸಮುದಾಯವನ್ನು ಬಳಿಸಿಕೊಳ್ಳುವುದರಿಂದ ಅನೇಕ ಕಾರ್ಯಕ್ರಮಗಳು ಯಶ್ವಸಿಯಾಗುತ್ತವೆ ಎಂದು ಹೇಳಿದರು.
ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಮಾತನಾಡಿ,ಮಕ್ಕಳಲ್ಲಿ ಇರುವ ಸೂಪ್ತವಾದ ಪ್ರತಿಭೆಗಳನ್ನು ಗುರುತಿಸಲು ಪ್ರತಿಭಾ ಕಾರಂಜಿಯಂತ ಕಾರ್ಯಕ್ರಮ ಒಂದು ಉತ್ತಮ ವೇದಿಕೆಯಾಗಿದೆ.ಮಕ್ಕಳಿಗಾಗಿ ಸರಕಾರವು ಅನೇಕ ಯೋಜನೆಗಳನ್ನು ಜಾರಿಗೆ ಮಾಡಿದ್ದು,ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಕುರಿತು ಬಹದ್ದೂರಬಂಡಿ ಕ್ಲಸ್ಟರ್ ಸಿ.ಆರ್.ಪಿ.ಹನುಮಂತಪ್ಪ ಕುರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮವನ್ನು ಬಹದ್ದೂರಬಂಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಯಲ್ಲಪ್ಪ ವಾಲ್ಮೀಕಿ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಅಕ್ಷರ ದಾಸೋಹದ ಸಹಾಯ ಅಧಿಕಾರಿ ಮಲ್ಲಿಕಾರ್ಜುನ ಗುಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸರಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷರಾದ ಶಿವಪ್ಪ ಜೋಗಿ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಹೊಳಿಬಸಯ್ಯಾ,ಕಾರ್ಯದರ್ಶಿ ಬಾಳಪ್ಪ ಕಾಳೆ,ಪತ್ತಿನ ಸಂಘದ ನಿರ್ದೇಶಕರಾದ ಮಲ್ಲಪ್ಪ ಗುಡದನ್ನವರ,ಅಂದಪ್ಪ ಬೋಳರಡ್ಡಿ,ಕನಕಪ್ಪ,ಶರಣಪ್ಪ ರಡ್ಡೇರ,ಮುಖ್ಯೋಪಾಧ್ಯಾಯರಾದ ಬಿ.ಎಂ.ನಾಗರಡ್ಡಿ,ಎಸ್.ಡಿ.ಎಂ.ಸಿ.ಯ ಅಧ್ಯಕ್ಷರಾದ ಹನುಮೇಶ,ಗ್ರಾ.ಪಂ.ಸದಸ್ಯರಾದ ಸೋಮೇಪ್ಪ,ಮಾರುತಿ,ಪ್ರಕಾಶರಡ್ಡಿ,ಪ್ರಭುಗೌಡ,ಪ್ರಕಾಶರಡ್ಡಿ ಕಾತರಕಿ ಮುಂತಾದವರು ಹಾಜರಿದ್ದರು.
ಕಾರ್ಯಕ್ರಮವನ್ನು ಶಕುಂತಲಾ ನಿರೂಪಿಸಿದರು.
ಶಿಕ್ಷಕರಾದ ನಾಗಪ್ಪ ಕಾತರಕಿ ಸ್ವಾಗತಸಿ,ವೀರನಗೌಡ ಪಾಟೀಲ ವಂದಿಸಿದರು.

Get real time updates directly on you device, subscribe now.

Comments are closed.

error: Content is protected !!