ಪ್ರತಿಯೊಬ್ಬರು ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಡಾ.ಲಿಂಗರಾಜು.ಟಿ

Get real time updates directly on you device, subscribe now.

ವಿಶ್ವ ಹೃದಯ ದಿನಾಚರಣೆ ಜಾಗೃತಿ ಕಾರ್ಯಕ್ರಮ

 ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಎನ್.ಸಿ.ಡಿ. ಕೋಶ ಮತ್ತು ಜಿಲ್ಲಾ ಬೋಧಕ ಆಸ್ಪತ್ರೆ ಹಾಗೂ ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್ ಹಾಗೂ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜ ಯುವ ರೆಡ್‌ಕ್ರಾಸ್ ಘಟಕ ವತಿಯಿಂದ ವಿಶ್ವ ಹೃದಯ ದಿನದ ಕುರಿತು ಜಾಗೃತಿ ಕಾರ್ಯಕ್ರಮವು ಇತ್ತೀಚೆಗೆ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜನಲ್ಲಿ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಲಿಂಗರಾಜು ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಾತನಾಡಿದ ಅವರು ಹೃದಯವು ಮಾನವ ದೇಹದ ಪ್ರಮುಖ ಅಂಗಾಗಳಲ್ಲಿ ಒಂದಾಗಿದೆ. ಅದರ ಅಸಮರ್ಪಕ ಕಾರ್ಯವು ಮಾರಣಾಂತಿಕತೆಗೆ ಕಾರಣವಾಗಬಹುದು ಆದಕಾರಣ ಪ್ರತಿಯೊಬ್ಬರು ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಅವಶ್ಯಕವಾಗಿರುತ್ತದೆ. ಹೃದಯ ರಕ್ತನಾಳದ ಆರೋಗ್ಯ ಮತ್ತು ಕೆಲವು ಜೀವನಶೈಲಿಯ ಅಭ್ಯಾಸಗಳ ಬಗ್ಗೆ ಅರಿವಿನ ಕೊರತೆಯಿಂದಾಗಿ ಹೃದಯ ರಕ್ತನಾಳದ ಕಾಯಿಲೆಗಳು ಮರಣಕ್ಕೆ ಪ್ರಮುಖ ಕಾರಣಗಳಾಗಿರುತ್ತವೆ. ಅರಂಭಿಕ ಚಿನ್ಹೆಗಳು ಮತ್ತು ರೋಗ ಲಕ್ಷಣಗಳನ್ನು ಅರ್ಥಮಾಡಿಕೊಳ್ಳುವುದು ಹಾಗೂ ತೊಡಕುಗಳನ್ನು ತಪ್ಪಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು ಜಡ ಜೀವನ ಶೈಲಿಯನ್ನು ತಪ್ಪಿಸುವುದು, ಸಾಕ್ರೀಯ ಜೀವನ ಶೈಲಿಯ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ.ನಂದಕುಮಾರ ಅವರು ಮಾತನಾಡಿ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಚಟುವಟಿಕೆಗೆ ಹೃದಯವನ್ನು ಬಳಸಿ” ಎಂಬ ಘೋಷವಾಕ್ಯಕ್ಕೆ ಪೂರಕವಾಗಿರುವ ಆಹಾರ ವಿಹಾರ ಮತ್ತು ದೈನಂದಿಕ ಜೀವನ ಶೈಲಿಯ ಬಗ್ಗೆ ತೀಳಿಸಿದರು. ಡಾ.ಪುನೀತ ರಾಜಕುಮಾರ ಹೃದಯ ಜ್ಯೋತಿ ಯೋಜನೆಯು ಕೊಪ್ಪಳ ಜಿಲ್ಲೆಯಲ್ಲಿ ಅನುಷ್ಠಾನಗೊಂಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ಹಾಗೂ ಹೃದಯ ಕಾಯಿಲೆಯ ಗಂಡಾAತರ ಅಂಶಗಳು, ಅಹಿತಕರ ಆಹಾರ ಸೇವನೆ, ಅಧಿಕ ತೂಕ, ದೈಹಿಕ ಮತ್ತು ಕ್ರೀಡಾಚಟುವಟಿಕೆಗಳ ನೂನತೆ ಕುರಿತು ತಿಳಿಸಿದರು ಹಾಗೂ 30 ವರ್ಷ ಹಾಗೂ ಮೇಲ್ಪಟ್ಟ ಎಲ್ಲಾ ವಯಸ್ಸಿನವರು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಗಣಪತಿ ಲಮಾಣಿ,
ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠ ನಿರ್ಮೂಲನ ಅಧಿಕಾರಿಗಳಾದ ಡಾ.ಪ್ರಕಾಶ, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕೊಪ್ಪಳ ರೆಡ್ ಕ್ರಾಸ್ ಘಟಕದ ನಿರ್ದೇಶಕರಾದ ಡಾ.ಪ್ರದೀಪ ಕುಮಾರ, ಐ.ಕ್ಯೂ.ಎಸ್.ಸಿ ಸನ್ ಸಂಚಾಲಕರಾದ ಡಾ. ಅಶೋಕ ಕುಮಾರ, ಉಪನ್ಯಾಸಕರಾದ ಡಾ.ನರಸಿಂಹ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಶಿವಾನಂದ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಲಾದ ಎಲ್.ವಿ ಸಜ್ಜನರ್, ಡಾ.ಜಯಶ್ರೀ ಸೇರಿದಂತೆ ಎನ್.ಸಿ.ಡಿ. ಕ್ಲಿನಿಕ್ ಸಿಬ್ಬಂದಿಗಳು, ಜಿಲ್ಲಾ ಎನ್.ಟಿ.ಸಿ.ಪಿ ಕಾರ್ಯಕ್ರಮದ ಸಿಬ್ಬಂದಿಗಳು ಮತ್ತು ಜಿಲ್ಲಾ ಸರ್ವೇಕ್ಷಣಾ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!