ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಹಾಯಧನಕ್ಕೆ ಅರ್ಜಿ ಆಹ್ವಾನ
ಮೊದಲು ಅರ್ಜಿ ಸಲ್ಲಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿಯ ನಮೂನೆಗಳು ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ರೈತರು ಕನಿಷ್ಠ 1 ಎಕರೆ ಜಮೀನನ್ನು ಹೊಂದಿರಬೇಕು. ಸದರಿ ಯೋಜನೆಯನ್ನು ಜಿಲ್ಲೆಯ ರೈತರ ಅವಶ್ಯಕತೆಗನುಗುಣವಾಗಿ ಅಚ್ಚುಕಟ್ಟು ಪ್ರದೇಶವನ್ನು ಒಳಗೊಂಡAತೆ ಕಾರ್ಯಕ್ರಮ ಅನುಷ್ಠಾನಗೊಳಿಸುವುದು.
ಘಟಕಗಳು:1. ಕ್ಷೇತ್ರ ಬದು ನಿರ್ಮಾಣ (ಸಾಮಾನ್ಯ ವರ್ಗ 80 ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90 ರಷ್ಟು ಇರುತ್ತದೆ). 2. ಕೃಷಿ ಹೊಂಡ (ಸಾಮಾನ್ಯ ವರ್ಗ 80ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90ರಷ್ಟು ಇರುತ್ತದೆ). 3. ನೀರು ಇಂಗದAತೆ ತಡೆಯಲು ಪಾಲಿಥೀನ್ ಹೊದಿಕೆ (ಸಾಮಾನ್ಯ ವರ್ಗ 80ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90ರಷ್ಟು ಇರುತ್ತದೆ.) 4. ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (ಸಾಮಾನ್ಯ ವರ್ಗ 40ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 50ರಷ್ಟು ಇರುತ್ತದೆ.) 5. ಕೃಷಿ ಹೊಂಡದಿAದ ನೀರು ಎತ್ತಲು ಡಿಸೇಲ್/ಪೇಟ್ರೋಲ್ ಪಂಪ್ಸೆಟ್ (ಸಾಮಾನ್ಯ ವರ್ಗ 80ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90ರಷ್ಟು ಇರುತ್ತದೆ.) 6.ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು/ಹನಿ) ನೀರಾವರಿ (ಎಲ್ಲಾ ವರ್ಗದ ರೈತರಿಗೆ 90ರಷ್ಟು ಸಹಾಯಧನ ಇರಿಸಲಾಗಿದೆ) ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.