ಅ.06 ರಂದು ಐ.ಎ.ಎಸ್, ಕೆ.ಎ.ಎಸ್ ಪರೀಕ್ಷೆಗಳ  ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪರೀಕ್ಷೆ: ನಿಷೇದಾಜ್ಞೆ ಜಾರಿ

Get real time updates directly on you device, subscribe now.

ಕೊಪ್ಪಳ ತಾಲ್ಲೂಕಿನಲ್ಲಿ ಅಕ್ಟೋಬರ್ 06ರಂದು ನಡೆಯಲಿರುವ ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.

ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪರೀಕ್ಷೆಯು ಕೊಪ್ಪಳದ ದಿಡ್ಡಿಕೇರಿಯ ಅಲ್ಪ ಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ ಪರೀಕ್ಷಾ ಕೇಂದ್ರದಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2.45 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಕಲಂ 163ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.
ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!