ಯುವನಿಧಿ ಯೋಜನೆ: ಪ್ರತಿ ತಿಂಗಳು ಸ್ವಯಂ ಘೋಷಣೆ ಪ್ರಮಾಣ ಪತ್ರ ಕಡ್ಡಾಯ

0

Get real time updates directly on you device, subscribe now.

: ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ ನೋಂದಾಯಿಸಿಕೊAಡಿರುವ ಫಲಾನುಭವಿಗಳು, ಯೋಜನೆಯ ಸೌಲಭ್ಯ ಪಡೆಯಲು ಪ್ರತಿ ತಿಂಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿಯಲ್ಲ, ನಿರುದ್ಯೋಗಿ ಎಂದು ಸ್ವಯಂ ಘೋಷಣೆ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

2022-23ನೇ ಶೈಕ್ಷಣಿಕ ವರ್ಷದಲ್ಲಿ ಪದವಿ, ಸ್ನಾತಕೊತ್ತರ ಪದವಿ ಮತ್ತು ಡಿಪ್ಲೋಮಾ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿಯಾಗಿದ್ದು, ಫಲಿತಾಂಶದ ನಂತರ ನಿರುದ್ಯೋಗಿಗಳಾದ 180 ದಿನಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ತಿಂಗಳಿನಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ. ಈ ಪ್ರಯೋಜನ ಪಡೆಯಬೇಕಿದ್ದರೆ, ಪ್ರತಿ ತಿಂಗಳಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆAದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆ ಮಾಡಬೇಕಾಗಿರುತ್ತದೆ.
ಪ್ರಯೋಜನ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತಿ ತಿಂಗಳು 25 ನೇ ದಿನಾಂಕದೊಳಗಾಗಿ ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ. ಈಗಾಗಲೇ ನೋಂದಾಯಿಸಿಕೊAಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗಳ ಪ್ರಯೋಜನ ಪಡೆದುಕೊಳ್ಳಲು ಸ್ಚಯಂ ಘೋಷಣೆ ಮಾಡಬೇಕಾಗಿರುವ ಕುರಿತು ಫಲಾನುಭವಿಗಳಿಗೆ ಎಸ್‌ಎಂಎಸ್ ಮೂಲಕ ಸಂದೇಶ ರವಾನಿಸಲಾಗುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಫಲಾನುಭವಿಗಳು ಯುವ ನಿಧಿ ಯೋಜನೆಯ ಸ್ವಯಂ ಘೋಷಣೆ ಮಾಡಿಕೊಳ್ಳಲು hಣಣಠಿs://sevಚಿsiಟಿಜhugs.ಞಚಿಡಿಟಿಚಿಣಚಿಞಚಿ.gov.iಟಿ/ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!