ಕನಕದಾಸ ಮತ್ತು ತತ್ವಪದ ಅಧ್ಯಯನ : ಮುನ್ನೋಟ :

0

Get real time updates directly on you device, subscribe now.

ಕೊಪ್ಪಳದಲ್ಲಿ ಅಕ್ಟೋಬರ್ 19, 2024
ಕನಕದಾಸ ಮತ್ತು ತತ್ವಪದ ಅಧ್ಯಯನ : ಮುನ್ನೋಟ :
ಡಾ ಬಿ ಕೆ ರವಿ
ಉಪಸ್ಥಿತಿ, ವಿದ್ವಾಂಸರೊಂದಿಗೆ ವಿದ್ವತ್ಪಪೂರ್ಣ ಸಮಾಲೋಚನಾ ಗೋಷ್ಠಿ
————————————————-
ಕೊಪ್ಪಳದ ಸರ್ಕಾರಿ ನೌಕರರ ಭವನ ಎಸ್.ಪಿ. ಆಫೀಸ್ ಮುಂಭಾಗದಲ್ಲಿ
ಅಕ್ಟೋಬರ್ 19,2024 ರಂದು
ಬೆಳಗ್ಗೆ 10.30 ಗಂಟೆಗೆ
ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರು ಇವರು ಆಯೋಜಿಸಿರುವ
ಕನಕದಾಸ ಮತ್ತು ತತ್ವಪದ ಅಧ್ಯಯನ : ಮುನ್ನೋಟ : ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾ.ತ. ಚಿಕ್ಕಣ್ಣ ವಹಿಸಲಿದ್ದಾರೆ
ಡಾ|| ಬಿ.ಕೆ. ರವಿ ಕುಲಪತಿಗಳು ಕೊಪ್ಪಳ ವಿಶ್ವವಿದ್ಯಾನಿಲಯ, ಇವರ ಉಪಸ್ಥಿತಿಯಲ್ಹಿ ಕಾರ್ಯಕ್ರಮ ಜರುಗಲಿದೆ
ಡಾ. ದಸ್ತಗೀರಸಾಬ್ ದಿನ್ನಿ ಸದಸ್ಯ ಸಂಚಾಲಕ, ಬನಶಂಕರಿ ವಿ. ಅಂಗಡಿ
ಸದಸ್ಯ ಕಾರ್ಯದರ್ಶಿ ರಾಷ್ಟ್ರೀಯ, ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ,
ಬೆಂಗಳೂರು ಆಗಮಿಸಲಿದ್ದಾರೆ.
ಕನಕದಾಸರ ಕುರಿತು :
——————————
ಭಕ್ತ ಶ್ರೇಷ್ಠ ಕನಕದಾಸರು ಈ ನಾಡು ಕಂಡ
ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು,
ಈ ನೆಲದ ಪರಂಪರೆಯ ಜೀವಾಳವಾಗಿದ್ದರು
ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ರುವಾರಿಯಾದವರು ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ಧವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ ಎನ್ನುವ ಮಾತು ಇದೆ
ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು.
ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ ಕಾವ್ಯಕೃತಿಗಳು ಇಂತಿವೆ:

ಮೋಹನತರಂಗಿಣಿ
ನಳಚರಿತ್ರೆ
ರಾಮಧಾನ್ಯ ಚರಿತೆ
ಹರಿಭಕ್ತಿಸಾರ
ನೃಸಿಂಹಸ್ತವ (ದೊರೆತಿಲ್ಲ)
ಮೋಹನತರಂಗಿಣಿ
ಮೋಹನತರಂಗಿಣಿಯು 42 ಸಂಧಿಗಳಿಂದ ಕೂಡಿದ್ದು ಸಾಂಗತ್ಯದಲ್ಲಿ ರಚಿತವಾಗಿರುವ 2798 ಪದ್ಯಗಳಿವೆ. ಮೋಹನತರಂಗಿಣಿಯಲ್ಲಿ ಕನಕದಾಸರು ಕೃಷ್ಣಚರಿತ್ರೆಯನ್ನು ಹೇಳುತ್ತಾ ತಮ್ಮ ಅಧಿರಾಜ ಕೃಷ್ಣದೇವರಾಯನನ್ನೇ ಕೃಷ್ಣನಿಗೆ ಹೋಲಿಸುತ್ತಾರೆ. ಅವರ ದ್ವಾರಕಾಪುರಿ ಸ್ವಯಂ ವಿಜಯನಗರವೇ ಆಗಿರುವುದು ಇತಿಹಾಸದಿಂದ ತಿಳಿದು ಬರುತ್ತದೆ. ಮೋಹನತರಂಗಿಣಿ ಅಥವಾ ಕೃಷ್ಣಚರಿತೆ ಎಂಬ ಈ ಕಾವ್ಯದಲ್ಲಿ ಕನಕದಾಸರ ಸಮಕಾಲೀನ ಜೀವನ ಚಿತ್ರಗಳು ಹಾಗೂ ಪೌರಾಣಿಕ ಕಥೆಗಳು ಅಚ್ಚಗನ್ನಡದಲ್ಲಿ ನಿರೂಪಿತವಾಗಿವೆ. ದಣ್ಣಾಯಕನಾಗಿ ಕನಕ ಆಗಾಗ್ಗೆ ರಾಜಧಾನಿ ವಿಜಯನಗರಕ್ಕೆ ಹೋಗಬೇಕಾಗಿತ್ತು. ವಿಜಯನಗರ ಸಾಮ್ರಾಜ್ಯದ ರಾಜವೈಭವ, ರಾಜಸಭೆ, ರಾಜಪರಿವಾರದ ಸರಸ ಸುಮ್ಮಾನ, ಶೃಂಗಾರ ಜೀವನ, ಜಲಕ್ರೀಡೆ, ಓಕುಳಿಯಾಟ, ನವರಾತ್ರಿ, ವಿಜಯನಗರದ ಪುನರಚನೆ, ಉದ್ಯಾನವನ, ಪ್ರಜೆಗಳ ವೇಷಭೂಷಣ, ರಾಜ್ಯದ ಯುದ್ಧ ವಿಧಾನ ಇತ್ಯಾದಿಗಳು ಮನಸೂರೆಗೊಂಡಿದ್ದವು ಅಂಥ ಅನುಭವಗಳನ್ನೇ ಬರಹ ರೂಪಕ್ಕಿಳಿಸಿದ ಆ ಬರಹವೇ ಇಂದು ನಮಗೆ ಲಭ್ಯವಿರುವ ಮೋಹನತರಂಗಿಣಿ. ಕನಕನ ಯೌವನ ಕಾಲದಲ್ಲಿ ರಚಿತವಾದ ತರಂಗಿಣಿಯ ಒಡಲಲ್ಲಿ ಯುದ್ಧದ ವರ್ಣನೆಗಳು ಹೆಚ್ಚೆನ್ನಬಹುದು. ಏಕೆಂದರೆ ಕನಕ ಸ್ವತಃ ಕಲಿಯಾಗಿದ್ದವನು ಹಂಪಿಯ ಪತನವನ್ನು (೧೫೬೫) ಸಹ ಕನಕ ನೋಡಿದ್ದನು. ಶಂಬರಾಸುರ ವಧೆ, ಬಾಣಾಸುರ ವಧೆ, ಹರಿಹರ ಯುದ್ಧ ಹೀಗೆ ವೀರರಸ, ರೌದ್ರರಸ ಕಾವ್ಯದಲ್ಲಿ ರಾರಾಜಿಸುತ್ತಿವೆ.
ನಳಚರಿತ್ರೆಯು 9 ಸಂಧಿಗಳಿಂದ ಕೂಡಿದ್ದು ಭಾಮಿನೀ ಷಟ್ಪದಿಯಲ್ಲಿ ರಚನೆಯಾಗಿರುವ 481 ಪದ್ಯಗಳಿವೆ. ಮಹಾಭಾರತದಂತಹ ರಾಷ್ಟ್ರ ಮಹಾಕಾವ್ಯಕ್ಕೆ ಪ್ರೇರಣೆಯಾದ ಉಜ್ವಲ ಆರ್ಯೇತರ ಪ್ರೇಮಕಥೆ ನಳ ದಮಯಂತಿಯರ ಕಥೆ. ೧೩ನೇ ಶತಮಾನದ ನಳ ಚಂಪೂವಿಗಿಂತ ಈ ನಳಚರಿತ್ರೆ ಹೃದಯಸ್ಪರ್ಶಿಯಾದ ಚಿತ್ರಣಗಳಿಂದ ಚಿರಂತನ ಪ್ರೇಮದ ಕಥನದಿಂದ ಅಶ್ಲೀಲತೆಯ ಸೋಂಕಿಲ್ಲದ ಶೃಂಗಾರ ವರ್ಣನೆಯಿಂದ ಶೋಭಿಸುತ್ತಾ ಇಂದಿಗೂ ಅತ್ಯಂತ ಜನಪ್ರಿಯವಾಗಿದೆ. ನಳ ಮತ್ತು ದಮಯಂತಿಯರು ಹಂಸದ ಮೂಲಕ ಪ್ರೇಮ ಸಂದೇಶಗಳನ್ನು ಕಳಿಸುವುದು, ಅವರ ಸಂತೋಷ-ಆಮೋದ-ಪ್ರವೋದ ನಂತರದ ಕಷ್ಟಕಾಲ ಹಾಗೂ ಅದರ ನಂತರದ ಪುನರ್ಮಿಲನ ಹೀಗೆ ಎಲ್ಲರಿಗೂ ಈ ಕಥೆ ಚಿರಪರಿಚಿತ. ಕಷ್ಟ ಕಾಲದಲ್ಲಿ ಕಾಡಿನಲ್ಲಿ ಮಲಗಿರುವಾಗ ದಮಯಂತಿಯನ್ನು ಕುರಿತು ನಳ: ಲಲಿತ ಹೇಮದ ತೂಗಮಂಚದ ಹೊಳೆವ ಮೇಲ್ವಾಸಿನಲಿ ಮಲಗು ಲಲನೆಗೀ ವಿಧಿ ಬಂದುದೇ ಹಾ! ಎನುತ ಬಿಸುಸುಯ್ದ (೫-೨) ಹೀಗೆ ನಳಚರಿತ್ರೆಯಲ್ಲಿ ಕರುಣರಸಕ್ಕೇ ಪ್ರಾಧಾನ್ಯತೆ ಇದೆ. ಅಲ್ಲಿ ಮೋಹನ ತರಂಗಿಣಿಯಲ್ಲಿ ಅದು ಕಣ್ಣು ಕುಕ್ಕುವ ಶೃಂಗಾರ, ಆದರೂ ಅದು ಹುಳಿಮಾವಿನಂತೆ ಹಂಚಿ ತಿನ್ನಲಾಗದು. ಮುಕ್ತವಾಗಿ ಚರ್ಚಿಸಲಾಗದು. ನಳಚರಿತ್ರೆಯ ಶೃಂಗಾರವಾದರೆ ಮಲ್ಲಿಗೆ ಮಾವಿನ ಹಾಗೆ, ಮಧುರ ರುಚಿ, ಮಧುರ ಸುವಾಸನೆ ಇದ್ದಂತೆ.
ಜನನ
————
ಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ 1509ರಲ್ಲಿ ಹಿಂದೂ ಕುರುಬ/ನಾಯಕ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. ಕನಕದಾಸರು ಬರಿ ಒಂದು ಜಾತಿಗೇ ಸೀಮಿತವಾದ ಭಕ್ತರಲ್ಲ ಎಲ್ಲಾ ಜಾತಿಗಳಿಗೆ ಬೇಕಾದವರು. 15 – 16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು. ಕನಕದಾಸರು ಅನೇಕ ಕೀರ್ತನೆಗಳನ್ನು ರಚಿಸಿದ್ದಾರೆ.
ಸುಮಾರು ಐದು ನೂರು ವರ್ಷಗಳ ಹಿಂದಿನ ಮಾತು. ವಿಜಯನಗರ ಸಾಮ್ರಾಜ್ಯದಲ್ಲಿದ್ದ ಬಂಕಾಪುರ ಪ್ರಾಂತದ ಮುಖ್ಯಪಟ್ಟಣದ ಹೆಸರು ಬಾಡ ಎಂದು. ವಿಜಯನಗರದಿಂದ ಗೋವಾಕ್ಕೆ ಹೋಗುವ ಹೆದ್ದಾರಿ. ಈ ಬಾಡದಿಂದಲೇ ಹಾಯ್ದು ಹೋಗುತ್ತಿತ್ತು. ಬಾಡ ಒಳ್ಳೇ ಆಯಕಟ್ಟಿನ ಸ್ಥಳ. ಈ ಬಂಕಾಪುರ ಪ್ರಾಂತಕ್ಕೆ ಡಣ್ಣಾಯಕ, ಬೀರಪ್ಪನಾಯಕ. (ಡಣ್ಣಾಯಕ ಎಂದರೆ ಆಯಕಟ್ಟಿನ ಸ್ಥಳದಲ್ಲಿ ಕಾದಿಟ್ಟ ಸೈನ್ಯದ ದಳಕ್ಕೆ ಸೇನಾಪತಿ ಎಂದು ನೇಮಿಸಲ್ಪಟ್ಟವನು) ಬೀರಪ್ಪನ ಹೆಂಡತಿ ಬಚ್ಚಮ್ಮ.

ಬೀರಪ್ಪನಾಯಕನಿಗೆ ತಿರುಪತಿ ತಿಮ್ಮಪ್ಪನಲ್ಲಿ ಬಹು ನಂಬಿಕೆ. ದಕ್ಷಿಣದಲ್ಲಿ ಸುಮಾರು ಒಂಬೈನೂರು ವರ್ಷಗಳ ಹಿಂದೆ ಶ್ರೀರಾಮಾನುಜಾಚಾರ್ಯರೆಂಬ ದೊಡ್ಡ ಗುರುಗಳು ಪ್ರಸಿದ್ಧರಾಗಿದ್ದರು. ಅವರು ಸ್ಥಾಪಿಸಿದ ಪಂಥಕ್ಕೆ ಶ್ರೀವೈಷ್ಣವ ಮತವೆಂದು ಹೆಸರು. ಡಣ್ಣಾಯಕ ಬೀರಪ್ಪನಾಯಕ ಮತ್ತು ಆತನ ಮಡದಿ ಬಚ್ಚಮ್ಮ ಇವರು ಶ್ರೀ ವೈಷ್ಣವ ಮತಕ್ಕೆ ಶರಣು ಹೋಗಿದ್ದರು. ಅಂದಿನಿಂದ ಇವರು ಸಹ ತಿರುಪತಿ ವಂಕಟೇಶ್ವರ ಸ್ವಾಮಿಯನ್ನೇ ತಮ್ಮ ಆರಾಧ್ಯ ದೈವವನ್ನಾಗಿ ಮಾಡಿಕೊಂಡರು.

ಬೀರಪ್ಪ ನಾಯಕ ಮತ್ತು ಬಚ್ಚಮ್ಮರಿಗೆ ಅನೇಕ ದಿನಗಳಿಂದ ಒಂದು ಹಂಬಲವಿತ್ತು. ಅದೇನೆಂದರೆ, ತಮಗೆ ಒಬ್ಬ ಕುಲದೀಪಕನಾದ ಮಗ ಜನಿಸಬೇಕು ಎಂದು. “ವಂಶೋದ್ಧಾರಕನಾದ ಒಬ್ಬ ಮಗನನ್ನು ಕರುಣಿಸು” ಎಂದು ಈ ದಂಪತಿಗಳು ತಿರುಪತಿ ತಿಮ್ಮಪ್ಪನಿಗೆ ಹರಕೆ ಹೊತ್ತಿದ್ದರು. ಅವರ ಆಸೆ ಫಲಿಸಿತು. ಬೀರಪ್ಪ ನಾಯಕ ಮತ್ತು ಬಚ್ಚಮ್ಮರಿಗೆ ಒಬ್ಬ ಮಗ ಜನಿಸಿದ. ತಂದೆ ತಾಯಿಗಳಿಗೆ ಆನಂದವೋ ಆನಂದ. ತಿರುಪತಿ ತಿಮ್ಮಪ್ಪನ ಆಶೀರ್ವಾದ ಎಂದು ಅವರು ತಮ್ಮ ಮಗುವಿಗೆ “ತಿಮ್ಮಪ್ಪ” ಎಂದೇ ನಾಮಕರಣ ಮಾಡಿದರು. ತಿಮ್ಮಪ್ಪ ಜನಿಸಿದ ಕಾಲ ಇಂತದ್ದೇ ಎಂದು ತಿಳಿಯದು; ಹದಿನೈದನೇಯ ಶತಮಾನದ ಕೊನೆಯ ವರ್ಷಗಳಲ್ಲಿ ಹುಟ್ಟಿದರು ಎಂದು ಹೇಳಬಹುದು.

ತಿಮ್ಮಪ್ಪನಾಯಕ ಒಬ್ಬ ಸೇನಾಧಿಪತಿಯ ಮಗನಾಗಿ ಜನಿಸಿದನಷ್ಟೆ. ಬಾಲ್ಯದಲ್ಲಿಯೇ ಅಕ್ಷರಾಭ್ಯಾಸ, ಬಂಕಾಪುರದ ಶ್ರೀನಿವಾಸಾಚಾರ್ಯರ ಬಳಿ ವಿದ್ಯಾಭ್ಯಾಸವಾಗಿ, ವ್ಯಾಕರಣ, ತರ್ಕ, ಮೀಮಾಂಸೆ, ಸಾಹಿತ್ಯಗಳಲ್ಲಿ ಪಾರಂಗತನಾದನು. ಜೊತೆಗೆ ಕತ್ತಿವರಸೆ, ಕುದುರೆ ಸವಾರಿಯನ್ನೂ ಕಲಿತ. ಕೆಲವು ವರ್ಷಗಳಲ್ಲಿ ಬೀರಪ್ಪನಾಯಕ ಮತ್ತು ಬಚ್ಚಮ್ಮ ತೀರಿಕೊಂಡರು. ತಂದೆಯ ಬಳಿಕ ತಿಮ್ಮಪ್ಪ ನಾಯಕ ತನ್ನ ಕಿರಿವಯಸ್ಸಿನಲ್ಲಿಯೇ ಬಂಕಾಪುರ ಪ್ರಾಂತಕ್ಕೆ ದಂಡನಾಯಕರಾಗಿದ್ದನು

 

 

ಕನಕದಾಸ ಮತ್ತು ತತ್ವಪದ ಅಧ್ಯಯನ – ಮುನ್ನೋಟ ಬುದ್ಧಿಜೀವಿಗಳೆಲ್ಲರೂ
ಬನ್ನಿ
—————————————————–
ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರಕ್ಕೆ ಪ್ರಸಕ್ತ ಸಾಲಿನ ಆಯವ್ಯಯ ಭಾಷಣದಲ್ಲಿ ಕನಕದಾಸ ಸಾಹಿತ್ಯವೂ ಸೇರಿದಂತೆ ತತ್ತ್ವಪದ ಸಾಹಿತ್ಯ ಕೀರ್ತನ ಸಾಹಿತ್ಯ ಮತ್ತು ಭಕ್ತಿ ಚಳವಳಿಯ ವಿಷಯವನ್ನು ಒಳಗೊಂಡು ಸಾಹಿತ್ಯ ಸಂಗ್ರಹ, ಸಮೀಕ್ಷ, ಅಧ್ಯಯನ, ಪ್ರಕಟಣೆ ಮತ್ತು ಪ್ರಸಾರ ಕಾರ್ಯವನ್ನು ಸೂಚಿಸಲಾಗಿದೆ. ಸರ್ಕಾರದ ಆಶಯದಂತೆ ಇದು ವ್ಯಾಪಕವಾಗಿ ಹಲವಾರು ವಿದ್ವಾಂಸರ ನೆರವಿನೊಂದಿಗೆ, ನಿರ್ವಹಿಸಬೇಕಾದ ಕಾರ್ಯವಾಗಿದೆ
ಈ ಕುರಿತಂತೆ ರಾಜ್ಯದ ಕೆಲವು ಕೇಂದ್ರಗಳಲ್ಲಿ ವಿದ್ವಾಂಸರೊಂದಿಗೆ ಸಮಾಲೋಚನಾ ಗೋಷ್ಠಿಯನ್ನು ಏರ್ಪಡಿಸಿ, ಅವರ ಸಲಹೆ-ಸೂಚನೆಗಳನ್ನು ಪಡೆಯುವ ಉದ್ದೇಶದಿಂದ, ಅಕ್ಟೋಬರ್ 19..2024ರಂದು ಕೊಪ್ಪಳ ಜಿಲ್ಲೆಯ, ಎಸ್ ಪಿ ಆಫೀಸ್ ಮುಂಭಾಗ ಇರುವ ಸರ್ಕಾರಿ ನೌಕರರ ಭವನದಲ್ಲಿ ಬೆಳಗ್ಗೆ 10.30 ಗಂಟೆಗೆ “ಕನಕದಾಸ ಮತ್ತು ತತ್ವಪದ ಅಧ್ಯಯನ – ಮುನ್ನೋಟ” ಎನ್ನುವ ಶೀರ್ಷಿಕೆಯಡಿ ವಿದ್ವಾಂಸರೊಂದಿಗೆ ಅನೌಪಚಾರಿಕ ಸಮಾಲೋಚನಾ ಗೋಷ್ಠಿಯನ್ನು ಏರ್ಪಡಿಸಲಾಗಿದೆ. .
ಬುದ್ಧಿಜೀವಿಗಳು ಸಕಾಲಕ್ಕೆ ಆಗಮಿಸಿ ರಚನಾತ್ಮಕ ಸಲಹೆ ಸೂಚನೆಗಳನ್ನು ನೀಡಬೇಕೆಂದು ಕೋರುತ್ತೇನೆ.

 

ಕಾ ತ ಚಿಕ್ಕಣ್ಣ
ಅಧ್ಯಕ್ಷರು ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಬೆಂಗಳೂರು

ಅಲ್ಲಾವುದ್ದೀನ ಯಮ್ಮಿ
ಪತ್ರಕರ್ತರು
ಕುಕನೂರ
9972517886

Get real time updates directly on you device, subscribe now.

Leave A Reply

Your email address will not be published.

error: Content is protected !!