ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
2024 -25 ನೇ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಹತೆಗಳು:.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ಪಂಗಡದವರಾಗಿರಬೇಕು, ಹಾಗೂ ಕಳೆದ 15 ವರ್ಷದಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕನಿಷ್ಠ 18 ವರ್ಷ ವಯೋಮಿತಿಯಲ್ಲಿರಬೇಕು. ವಾರ್ಷಿಕ ಆದಾಯ ಗ್ರಾಮೀಣ 1,50,000 ರೂ, ನಗರ ಪ್ರದೇಶ 2,00,000 ರೂ, ಮಿತಿಯಲ್ಲಿರಬೇಕು. ಅರ್ಜಿದಾರರು ಅಥವಾ ಕುಟುಂಬದವರು ಯಾವುದೇ ಸದ್ಯಸರು ಸರ್ಕಾರಿ, ಅರೆ ಸರ್ಕಾರಿ ನೌಕರಿ ಹೊಂದಿರಬಾರದು. ಜಾತಿ, ಆದಾಯ ಪತ್ರ, ರೇಶನಕಾರ್ಡ ಅಥವಾ ಚುನಾವಣೆ ಗುರುತಿನ ಚೀಟಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ. ಡ್ರೆöÊವಿಂಗ್ ಲೈಸ್ನ್ಸ್, ಬ್ಯಾಂಕ್ ಪುಸ್ತಕ, ಸಣ್ಣ ಹಿಂಡುವಳಿ(ಗAಗಕಲ್ಯಾಣ ಯೋಜನೆ) ದಾಖಲಾತಿಗಳನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಯೋಜನೆಯ ಅರ್ಹತೆ, ಮತ್ತು ಸಲ್ಲಿಸುವ ದಾಖಲಾತಿಗಳ ಕುರಿತು ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ , ನಿಗಮಗಳ ವೆಬ್ ಸೈಟ್ , ಕಲ್ಯಾಣ ಮಿತ್ರ ಏಕಿಕೃತ ಎಸ್ ಸಿ, ಎಸ್ ಟಿ ಸಹಾಯವಾಣಿ ಸಂಖ್ಯೆ 9482300400 ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.