ನುಡಿದಂತೆ ನಡೆದ ಸಿಎಂ- ಕೆಯುಡಬ್ಲ್ಯೂಜೆ ಧನ್ಯವಾದ

Get real time updates directly on you device, subscribe now.

ಹಿಂದುಳಿದ ವರ್ಗಗಳ ಪತ್ರಿಕೆಗಳ ಜಾಹೀರಾತು ಮುಂದುವರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ 24 ಗಂಟೆಯಲ್ಲಿ ಅದನ್ನು ಈಡೇರಿಸಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಸ್ವಾಗತಿಸಿದೆ.

ಹಿಂದುಳಿದ ವರ್ಗಗಳ ಪತ್ರಿಕೆಗಳಿಗೆ ಜಾಹೀರಾತು
ನಿಲ್ಲಿಸಿರುವ‌ ಬಗ್ಗೆ ನಿನ್ನೆ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾ ದಿನಾಚರಣೆಗೆ ಬಂದ ಸಂದರ್ಭದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸ್ಥಳದಲ್ಲೇ ಮುಖ್ಯಮಂತ್ರಿಗಳು ಜಾಹೀರಾತು ಮತ್ತು ಸೌಲಭ್ಯ ಮುಂದುವರಿಸುವಂತೆ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಸಮ್ಮುಖದಲ್ಲಿ ಸೂಚನೆ ನೀಡಿದ್ದರು. ಈ ಬಗ್ಗೆ ಕೆಲ ಪತ್ರಕರ್ತರು ಮತ್ತು ಸಂಘ ಪ್ರಭಾಕರ್ ಅವರಿಗೆ ಮನವಿ ಅರ್ಪಿಸಿದ್ದವು.

ಬೇಡಿಕೆ ಈಡೇರಿಸಿರುವುದನ್ನು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಆದೇಶ ಪ್ರತಿ ಸಹಿತ ಖಚಿತಪಡಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಪತ್ರಿಕೆಗಳಿಗೆ ನಿಲ್ಲಿಸಿದ್ದ ಜಾಹೀರಾತು ಮುಂದುವರಿಸಲು ಆದೇಶಿಸಲಾಗಿದೆ ಎಂದು ಪ್ರಭಾಕರ್ ಅವರು ತಿಳಿಸಿದ್ದಾರೆ.

ಕೆಯುಡಬ್ಲ್ಯೂಜೆ ಧನ್ಯವಾದ:

ಪತ್ರಿಕೆಗಳ ಬೇಡಿಕೆ ಈಡೇರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯೂಜೆ ಧನ್ಯವಾದ ತಿಳಿಸಿದೆ. ಈ ನಿಟ್ಟಿನಲ್ಲಿ ಆದ್ಯತೆ ನೀಡಿ ಕೊಂಡಿಯಾಗಿ ಕೆಲಸ‌ ಮಾಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕೆಯುಡಬ್ಲ್ಯೂಜೆ ಅಭಾರಿಯಾಗಿದೆ.

Get real time updates directly on you device, subscribe now.

Comments are closed.

error: Content is protected !!
%d bloggers like this: