ಪಿಯು ಅನುತ್ತೀರ್ಣರಾದವರಿಗೆ ಆಗಸ್ಟ್ 21ರಿಂದ ವಿಶೇಷ ಪೂರಕ ಪರೀಕ್ಷೆ: ರಾಮಚಂದ್ರನ್ ಆರ್

Get real time updates directly on you device, subscribe now.

ಕೊಪ್ಪಳ : ದ್ವಿತೀಯ ಪಿಯು ಹಂತದಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ನೆರವಾಗುವ ಸಲುವಾಗಿ ಘನ ಸರ್ಕಾರದ ಆದೇಶದಂತೆ 2023ರಲ್ಲಿ ವಿಶೇಷ ಪೂರಕ (2ನೇ) ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪರೀಕ್ಷೆಯು ದಿನಾಂಕ 21-08-2023 ರಿಂದ ದಿನಾಂಕ 02-09-2023ರವರೆಗೆ ಜರುಗಲಿದ್ದು ಪರೀಕ್ಷೆಯನ್ನು ಕಾಲೇಜು ಲಾಗಿನ್ ಮೂಲಕ ನೋಂದಣಿ ಮಾಡಿಕೊಳ್ಳಲು ಜುಲೈ 28ರಿಂದ ದಿನಾಂಕ 10-08-2023ರವರೆಗೆ ಅವಕಾಶ ನೀಡಲಾಗಿದೆ. ತಮ್ಮ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಅವರುಗಳು ಪರೀಕ್ಷೆ ತೆಗೆದುಕೊಳ್ಳುವಂತೆ ಪ್ರೇರೇಪಿಸಲು ಹಾಗೂ ಈ ಮೂಲಕ ವಿದ್ಯಾರ್ಥಿಗಳು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕರಿಸುವಂತೆ ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ರಾಮಚಂದ್ರನ್ ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: